ಮುನ್ನೂರ ಅರುವತ್ತು ನಕ್ಷತ್ರಕ್ಕೆ

ವಿಕಿಸೋರ್ಸ್ದಿಂದ



Pages   (key to Page Status)   

ಮುನ್ನೂರ ಅರುವತ್ತು ನಕ್ಷತ್ರಕ್ಕೆ ಬಾಯಿಬಿಟ್ಟುಕೊಂಡಿಪ್ಪುದೆ ಸಿಂಪು ಅದು ಸ್ವಾತಿಗಲ್ಲದೆ ಬಾಯ್ದೆರೆಯದು ಕೇಳು
ಕೇಳು ತಂದೆ. ಎಲ್ಲವಕ್ಕೆ ಬಾಯ ಬಿಟ್ಟಡೆ ತಾನೆಲ್ಲಿಯ ಮುತ್ತಪ್ಪುದು ಪರಮಂಗಲ್ಲದೆ ಹರುಷತಿಕೆಯಿಲ್ಲೆಂದು ಕರಣಾದಿ ಗುಣಂಗಳ ಮರೆದರು
ಇದು ಕಾರಣ
ಕೂಡಲಸಂಗನ ಶರಣರು ಸಪ್ತವ್ಯಸನಿಗಳಲ್ಲಾಗಿ.