ಅಷ್ಟದಳಕಮಲವ ಮೆಟ್ಟಿ ಚರಿಸುವ

ವಿಕಿಸೋರ್ಸ್ದಿಂದ



Pages   (key to Page Status)   


ಅಷ್ಟದಳಕಮಲವ ಮೆಟ್ಟಿ ಚರಿಸುವ ಹಂಸನ ಭೇದವ ಹೇಳಿಹೆನು: ಪೂರ್ವದಳಕೇರಲು ಗುಣಿಯಾಗಿಹನು. ಅಗ್ನಿದಳಕೇರಲು ಕ್ಷುಧೆಯಾಗಿಹನು. ದಕ್ಷಿಣದಳಕೇರಲು ಕ್ರೋದ್ಥಿಯಾಗಿಹನು. ನೈಋತ್ಯದಳಕೇರಲು ಅಸತ್ಯನಾಗಿಹನು. ವರುಣದಳಕೇರಲು ನಿದ್ರೆಗೆಯ್ವುತಿಹನು. ವಾಯುದಳಕೇರಲು ಸಂಚಲನಾಗಿಹನು. ಉತ್ತರದಳಕೇರಲು ಧರ್ಮಿಯಾಗಿಹನು. ಈಶಾನ್ಯದಳಕೇರಲು ಕಾಮಾತುರನಾಗಿಹನು. ಈ ಅಷ್ಟದಳಮಂಟಪದ ಮೇಲೆ ಹರಿದಾಡುವ ಹಂಸನ ಕುಳನ ತೊಲಗಿಸುವ ಕ್ರಮವೆಂತುಟಯ್ಯಾಯೆಂದೊಡೆ: ಅಷ್ಟದಳಮಂಟಪದ ಅಷ್ಟಕೋಣೆಗಳೊಳಗೆ ಅಷ್ಟ ಲಿಂಗಕಳೆಯ ಪ್ರತಿಷ್ಠಿಸಿ ಹಂಸನ ನಟ್ಟ ನಡುಮಧ್ಯದಲ್ಲಿ ತಂದು ನಿಲಿಸಲು ಮುಕ್ತಿಮೋಕ್ಷವನೆಯ್ದಿ ಪರವಶನಾಗಿಪ್ಪನಯ್ಯಾ
ಮಹಾಲಿಂಗಗುರು ಶಿವಸಿದ್ಧೇಶ್ವರ ಪ್ರಭುವೇ.