ಪುಟ:ಕರ್ನಾಟಕ ಗತವೈಭವ.djvu/೧೫೦

ವಿಕಿಸೋರ್ಸ್ದಿಂದ
ಈ ಪುಟವನ್ನು ಪ್ರಕಟಿಸಲಾಗಿದೆ

೧೫ನೆಯ ಪ್ರಕರಣ – ವಾಙ್ಮಯ ವೈಭವ

೧೧೯


ಯನ, ಇಂಥ ಅನೇಕ ಬಗೆಯ ಶಾಸ್ತ್ರಗಳಿಗೂ ವೇದಗಳಿಗೂ ವ್ಯಾಖ್ಯಾನ ಬರೆದಂಥ ವಿದ್ಯಾರಣ್ಯರು ಜನ್ಮವೆತ್ತಿದರು. ಈ ಕಾಲಕ್ಕೆ ಬಾಳಿದ ಕನ್ನಡ ಕವಿಗಳು- ಮಧುರ, ಮಂಗರಸ, ಗದಗಿನ ಕುಮಾರವ್ಯಾಸ, ನಿತ್ಯಾತ್ಮಶುಕ, ಲಕ್ಕಣ್ಣ ದಂಡೇಶ, ಇವರಲ್ಲದೆ ಪುರಂದರದಾಸ ವ್ಯಾಸರಾಯರಂಥ ಧಾರ್ಮಿಕ ಸತ್ಪುರುಷರು ಉದಯಿಸಿದರು. ಕೃಷ್ಣರಾಯನ ಆಸ್ಥಾನವಂತೂ ಅಷ್ಟದಿಗ್ಗಜಗಳಿಂದ ಶೋಭಿಸುತ್ತಿತ್ತು. ಕರ್ನಾಟಕ ಕವಿಗಳನೇಕರು ಸಂಸ್ಕೃತ ಮತ್ತು ಕನ್ನಡ ಎರಡು ಭಾಷೆಗಳಲ್ಲಿಯೂ ಪಂಡಿತರಾದುದರಿಂದ ಅವರಿಗೆ ಉಭಯ ಕವಿಚಕ್ರವರ್ತಿ ಎಂದು ಬಿರುದಿತ್ತು.

ಅನೇಕ ಅರಸರು ಸ್ವತಃ ಕನ್ನಡ ಕವಿಗಳಾಗಿದ್ದರು. ೩ನೆಯ ಶತಮಾನದಲ್ಲಿ ಗಂಗ ಅರಸನಾದ ೨ನೆಯ ಮಾಧವನು “ದತ್ತಕಸೂತ್ರವೃತ್ತಿ” ಎಂಬ ಗ್ರಂಥವನ್ನು ಬರೆದನು. ೫ನೆಯ ಶತಮಾನದಲ್ಲಿ ದುರ್ವಿನೀತನೆಂಬ ಗಂಗ ಅರಸನು ಶಬ್ದಾವತಾರವನ್ನೂ ಪೈಶಾಚ ಭಾಷೆಯಲ್ಲಿದ್ದ ಬೃಹತ್ಕಥೆಗೆ ಸಂಸ್ಕೃತ ಪರಿವರ್ತನವನ್ನೂ ಭಾರವಿಯ ಕಿರಾತಾರ್ಜುನಕ್ಕೆ ಕನ್ನಡ ಟೀಕೆಯನ್ನೂ ಬರೆದನು. ಅಲ್ಲದೆ ಕನ್ನಡದಲ್ಲಿ ಒಂದು ಗದ್ಯಗ್ರಂಥವನ್ನು ಬರೆದಂತೆ ತಿಳಿಯುತ್ತದೆ. ಆದರೆ ಇದು ಉಪಲಬ್ಧವಿಲ್ಲ. ೮ನೆಯ ಶತಮಾನದಲ್ಲಿ ಗಂಗರಸನಾದ ಶ್ರೀಪುರುಷನೆಂಬವನು ಗಜಶಾಸ್ತ್ರವೆಂಬ ಗ್ರಂಥವನ್ನು ರಚಿಸಿದ್ದನಂತೆ! ಅವನ ಮಗನಾದ ಶಿವಮಾರನೆಂಬವನು 'ರಾಜಾಷ್ಟಕ'ವೆಂಬ ಗ್ರಂಥವನ್ನು ರಚಿಸಿದನು. ಇವನು ನಾಟಕಾದಿಗಳಲ್ಲಿ ಪ್ರಮಾಣ ಪ್ರವೀಣನೆಂದೆನಿಸಿಕೊಂಡಿರುವನು. ಅಲ್ಲದೆ, ಆನೆ ಕುದುರೆಗಳನ್ನು ಶಿಕ್ಷಿಸುವುದರಲ್ಲಿಯೂ ಇವನ ಗ್ರಂಥವನ್ನೇ ಪ್ರಮಾಣವಾಗಿ ಹಿಡಿಯುತ್ತಿದ್ದರಂತೆ!

ನಮ್ಮ ಕರ್ನಾಟಕ ಹೆಂಗಸರು ವಾಙ್ಮಯಕ್ಕೆ ಮಾಡಿದ ಸೇವೆಯು ಮಿಕ್ಕ ಯಾರಿಗಿಂತಲೂ ಕಡಿಮೆಯಾಗಿರುವುದಿಲ್ಲ. ಕಂತಿ, ಹೊನ್ನಮ್ಮ ಮುಂತಾದ ಕವಯಿತ್ರಿಯರು ಕನ್ನಡಿಗರಿಗೆ ಗೊತ್ತೇ ಇರುವುದರಿಂದ ಅವರ ಹೆಸರನ್ನು ಇಲ್ಲಿ ಪುನಃ ಹೇಳುವುದಿಲ್ಲ. ಆದರೆ ಕರ್ನಾಟರಾಜಪ್ರಿಯಾ ಕರ್ಣಾಟೀ, ನಾಗಮ್ಮ ವಿಜ್ಜಕಾ ಮುಂತಾದ ಹೆಂಗಸರು ಸಂಸ್ಕೃತ ಕವಯಿತ್ರಿಯರಾಗಿದ್ದರೆಂಬುದು ಹೋದ ವರುಷದ ವಾಗ್ಭೂಷಣದ ವಾಚಕರಿಗೆ ಗೊತ್ತಾಗಿರಬಹುದು. ಆದರೆ ಮೊನ್ನೆ ಮೊನ್ನೆ ಜಗತ್ತಿಗೆ ಗೊತ್ತಾದ ವಿಜಯನಗರದ ಬುಕ್ಕಮಹಾರಾಯನ ಹಿರೀ ಸೊಸೆಯಾದ ಗಂಗಾದೇವಿಯೆಂಬವಳೂ ಅತಿಶಯ ಪ್ರತಿಭಾಸಂಪನ್ನಳಾದ ಸಂಸ್ಕೃತ