ಅಂಗವಿಲ್ಲದ ನಿರಂಗಿಗೆ ಅಗ್ನಿಯ
ಗೋಚರ
ಲೇಖಕರು: ಲೇಖಕರ ಕೃತಿಗಳು
ಶೀರ್ಷಿಕೆ: vachana saahitya
ವರ್ಷ: 1550-1600 AD
ಪ್ರಕಾಶಕರು: anubhava mantapa
ಮೂಲ: vachana saahitya
ಪುಟಗಳು: ಈ ಕೃತಿಯ ಪುಟಗಳು
ಅಂಗವಿಲ್ಲದ ನಿರಂಗಿಗೆ ಅಗ್ನಿಯ ಬಳಗದ ಅವಯವಂಗಳು
ಬ್ರಹ್ಮಕಪಾಲವೇ ಶಿರಸ್ಸಾಗಿಪ್ಪುದು ನೋಡಾ. ಅಗ್ನಿಯಂಗದ ಉದರದೊಳಗೆ ಪರಿಪರಿಯ ರಸದ ಭಾವಿ. ಆ ರಸದ ಭಾವಿಯ ತುಳಕ ಹೋದವರೆಲ್ಲ ಅಗ್ನಿಯನುಣ್ಣದೆ
ಆ ರಸವನೆ ಉಂಡು
ಅಗ್ನಿಯ ಸ್ವರೂಪವಾದರು ನೋಡ. ಅಗ್ನಿಯ ಸ್ವರೂಪವಾದುದ ಕಂಡು ಕುರುಹಳಿದು ಅರುಹಡಗಿ ನಿರವಯಲಸಮಾದ್ಥಿಯಲ್ಲಿ ನಿಂದ ನಿಬ್ಬೆರಗು ಮೃತ ಗಮನ ರಹಿತನು ನೋಡಾ ಲಿಂಗೈಕ್ಯನು
ಮಹಾಲಿಂಗಗುರು ಶಿವಸಿದ್ಧೇಶ್ವರ ಪ್ರಭುವೇ.