ಅಂತರಂಗದಲ್ಲಿ ದಂಡ ಅರುಹಿನ

ವಿಕಿಸೋರ್ಸ್ದಿಂದ



Pages   (key to Page Status)   


ಅಂತರಂಗದಲ್ಲಿ ಅರುಹಿನ ಶುದ್ಧಿಯನರಿಯದೆ
ಬಹಿರಂಗದಲ್ಲಿ ಕಂಥೆ ಕರ್ಪರ ದಂಡ ಕಮಂಡಲು ಭಸ್ಮದಗುಂಡಿಗೆ ಎಂಬ ಪಂಚಮುದ್ರೆಗಳ ಧರಿಸಿ
ಧರೆಯ ಮಂಡಲದೊಳಗೆ ಚರಿಸುವ ಅಣ್ಣಗಳ ಕಂಡು ಬೆರಗಾದೆನಯ್ಯಾ. ಅದೇನು ಕಾರಣವೆಂದೊಡೆ : ಪುರಜನರ ಮೆಚ್ಚಿಸುವೆನೆಂದು ಜಾತಿಕಾರನು ಓತು ವೇಷವ ಧರಿಸಿ ಒಡಲ ಹೊರೆವಂತೆ
ಕೊಡುಕೊಂಬುವ ಭಕ್ತನ ಮೆಚ್ಚಿಸುವೆನೆಂದು ಮೃಡನ ವೇಷವ ಧರಿಸಿ
ಒಡಲ ಕಕ್ಕುಲತೆಗೆ ತಿರುಗುವ ಕಡುಪಾತಕ ಜಡಜೀವಿಗಳ ಮುಖವ ನೋಡಲಾಗದಯ್ಯಾ ಅಖಂಡೇಶ್ವರಾ.