ಅಂತರಂಗದೊಳಗಿರ್ದ ನಿರವಯಲಿಂಗವನು ಸಾವಯವಲಿಂಗವ
ಗೋಚರ
ಲೇಖಕರು: ಬಸವಣ್ಣ
ಶೀರ್ಷಿಕೆ: vachana saahitya
ವರ್ಷ: 1191 AD
ಪ್ರಕಾಶಕರು: anubhava mantapa
ಮೂಲ: vachana saahitya
ಪುಟಗಳು: ಇಲ್ಲಿನ ಪುಟಗಳು
ಅಂತರಂಗದೊಳಗಿರ್ದ ನಿರವಯಲಿಂಗವನು ಸಾವಯವಲಿಂಗವ ಮಾಡಿ
ಶ್ರೀಗುರುಸ್ವಾಮಿ ಕರಸ್ಥಲಕ್ಕೆ ತಂದುಕೊಟ್ಟನಾಗಿ
ಆ ಇಷ್ಟಲಿಂಗವೆ ಅಂತರಂಗವನಾವರಿಸಿ ಅಂತರಂಗದ ಕರಣಂಗಳೆ ಕಿರಣಂಗಳಾಗಿ ಬೆಳಗುವ ಚಿದಂಶವೆ ಪ್ರಾಣಲಿಂಗವು
ಆ ಮೂಲಚೈತನ್ಯವೆ ಭಾವಲಿಂಗವು. ಇದನರಿದು
ನೋಡುವ ನೋಟ ಭಾವಪರಿಪೂರ್ಣವಾಗಿ ತಾನು ತಾನಾದಲ್ಲದೆ
ಇದಿರಿಟ್ಟು ತೋರುವುದಿಲ್ಲವಾಗಿ ಅಖಂಡ ಪರಿಪೂರ್ಣವಪ್ಪ ನಿಜವು ತಾನೆ
ಕೂಡಲಸಂಗಮದೇವ.