ವಿಷಯಕ್ಕೆ ಹೋಗು

ಅಘಟಿತ ಘಟಿತನ ಒಲವಿನ

ವಿಕಿಸೋರ್ಸ್ದಿಂದ
ಶೀರ್ಷಿಕೆ: vachana saahitya
ವರ್ಷ: 1191 AD
ಪ್ರಕಾಶಕರು: anubhava mantapa
ಮೂಲ: vachana saahitya

ಅಘಟಿತ ಘಟಿತನ ಒಲವಿನ ಶಿಶು ಕಟ್ಟಿದೆನು ಜಗಕ್ಕೆ ಬಿರಿದನು. ಕಾಮ ಕ್ರೋಧ ಲೋಭ ಮೋಹ ಮದ ಮತ್ಸರಂಗಳಿಗೆ ಇಕ್ಕಿದೆನು ಕಾಲಲಿ ತೊಡರನು. ಗುರುಕೃಪೆಯೆಂಬ ತಿಗುರನಿಕ್ಕಿ ಮಹಾಶರಣೆಂಬ ತಿಲಕವನಿಕ್ಕಿ ನಿನ್ನ ಕೊಲುವೆ ಗೆಲುವೆ ಶಿವಶರಣೆಂಬ ಅಲಗ ಕೊಂಡು. ಬಿಡು ಬಿಡು ಕರ್ಮವೆ
ನಿನ್ನ ಕೊಲ್ಲದೆ ಮಾಣೆನು. ಕೆಡಹಿಸಿಕೊಳ್ಳದೆನ್ನ ನುಡಿಯ ಕೇಳಾ. ಕೆಡದ ಶಿವಶರಣೆಂಬ ಅಲಗನೆ ಕೊಂಡು ನಿನ್ನ ಕೊಲುವೆ ಗೆಲುವೆ ನಾನು. ಬ್ರಹ್ಮಪಾಶವೆಂಬ ಕಳನನೆ ಸವರಿ
ವಿಷ್ಣು ಮಾಯೆಯೆಂಬ ಎಡೆಗೋಲನೆ ನೂಕಿ
ಎನ್ನೊಡೆಯ ಚೆನ್ನಮಲ್ಲಿಕಾರ್ಜುನಯ್ಯ ತಲೆದೂಗಲಿ ಕಾದುವೆನು ನಾನು.