ಅರಿದರಿದು ಎನಗಿಂದು ಕಣ್ಗೆ ಮಂಗಳವಾಯಿತ್ತು

ವಿಕಿಸೋರ್ಸ್ದಿಂದ


Pages   (key to Page Status)   

ಅರಿದರಿದು ಎನಗಿಂದು ಕಣ್ಗೆ ಮಂಗಳವಾಯಿತ್ತು

ಒಂದಹುದು ಒಂದಾಗದೆಂಬ ಭ್ರಮೆಯವನಲ್ಲ 
ಬೇಕು ಬೇಡೆಂಬ ಜಂಜಡದವನಲ್ಲ
ಎಡೆವರಿಯದ ನೋಟ
ನುಡಿಯ ಸಡಗರವರತು ಎಡೆಯಾಟ ಕೋಟಲೆಯ ಕಳೆಯ ಬಂದನು
ನೋಡುವರ ಮನದ ಸುಖದ ಸಾಗರನಿಧಿಯನೇನೆಂದುಪಮಿಸುವೆನು ಎನ್ನ ಉಭಯಕರ್ಮವ ಕಳೆದು ತನ್ನೊಳಗೆ ಇಂಬಿಟ್ಟುಕೊಳಬಂದನು
ಕೂಡಲಸಂಗಮದೇವ
ಕೃಪಾಮೂರ್ತಿ.