ಅರಿವನರಿದು ಮರಹ ಮರೆದು,

ವಿಕಿಸೋರ್ಸ್ದಿಂದ



Pages   (key to Page Status)   


ಅರಿವನರಿದು ಮರಹ ಮರೆದು
ಸಂಕಲ್ಪ ಸಂಶಯವಳಿದ ನಿಲವನು
ಅರಿದ ಪರಿ ಎಂತು ಹೇಳಾ ? ಅರಿದೆನೆಂದಡೆ ಜ್ಞಾನಕ್ಕೆ ದೂರ
ಮರೆದೆನೆಂದಡೆ ಮನಕ್ಕೆ ದೂರ. ನಿರ್ಭಾವದ ಹೊಲಿಗೆಯಲ್ಲಿ ಭಾವಸಂಕಲ್ಪ ಬಿಡದು. ನಮ್ಮ ಗುಹೇಶ್ವರಲಿಂಗದಲ್ಲಿ ಮನಮಗ್ನಯೋಗ
ನಿನಗೆಂತು ಸಾಧ್ಯವಾಯಿತ್ತು ಹೇಳಾ ಸಿದ್ಧರಾಮಯ್ಯಾ ?