ವಿಷಯಕ್ಕೆ ಹೋಗು

ಅರಿವಿಂದಲಾದ ಮರಹಿನ ಶಬ್ದವನರಿಯಲಾಗದು,

ವಿಕಿಸೋರ್ಸ್ದಿಂದ


ಶೀರ್ಷಿಕೆ: vachana saahitya
ವರ್ಷ: 1144-1168 AD
ಪ್ರಕಾಶಕರು: anubhava mantapa
ಮೂಲ: vachana saahitya


ಅರಿವಿಂದಲಾದ ಮರಹಿನ ಶಬ್ದವನರಿಯಲಾಗದು
ಅರಿದಡದಕ್ಕೆ ಭವವು (ಭಂಗವು?)
ಅರಿವರತು ಮರಹು ನಷ್ಟವಾಗಿ ಜ್ಞಾನ ಬೆಂದಲ್ಲಿ ನಿರ್ಣಯವೆಲ್ಲಿಯದು ? ಜ್ಞಾನದೊಳಗಣ ಬುದ್ಧಿಯ ಭಸ್ಮವಾಗಿ ಧರಿಸಿದಲ್ಲಿ ಕೂಡಲಚೆನ್ನಸಂಗಮದೇವರು ಸರ್ವನಿವಾಸಿ.