ಅಹುದಹುದು, ಅಂಗಕ್ಕೆ ಲಿಂಗವನರಸಬೇಕಲ್ಲದೆ

ವಿಕಿಸೋರ್ಸ್ದಿಂದ



Pages   (key to Page Status)   


ಅಹುದಹುದು
ಅಂಗಕ್ಕೆ ಲಿಂಗವನರಸಬೇಕಲ್ಲದೆ ಲಿಂಗಕ್ಕೆ ಲಿಂಗವನರಸಲುಂಟೆ ? ಪ್ರಾಣಕ್ಕೆ ಜ್ಞಾನವನರಸಬೇಕಲ್ಲದೆ ಜ್ಞಾನಕ್ಕೆ ಜ್ಞಾನವನರಸಲುಂಟೆ ? ಎರಡಾಗಿರ್ದುದನೊಂದು ಮಾಡಿಹೆನೆನಬಹುದಲ್ಲದೆ ಒಂದಾಗಿರ್ದುದನೊಂದು ಮಾಡಲಿಲ್ಲ. ಕೂಡಲಚೆನ್ನಸಂಗಯ್ಯನಲ್ಲಿ ನಿಸ್ಸೀಮ ಸಿದ್ಧರಾಮಯ್ಯನ ಶ್ರೀಪಾದಕ್ಕೆ ಶರಣೆಂದು ಬದುಕಿದೆನು ಕಾಣಾ ಪ್ರಭುವೆ.