ಆತುರದ ಧ್ಯಾನದಿಂದ ಧಾವತಿಗೊಂಡೆ

ವಿಕಿಸೋರ್ಸ್ದಿಂದ


Pages   (key to Page Status)   

ಆತುರದ ಧ್ಯಾನದಿಂದ ಧಾವತಿಗೊಂಡೆ ; ಜ್ಯೋತಿರ್ಲಿಂಗವ ಕಾಣಿಸಬಾರದು. ಮಾತಿನ ಮಾಲೆಗೆ ಸಿಲುಕುವನಲ್ಲ ; ಧಾತುಗೆಡಿಸಿ ಮನವ ನೋಡಿ ಕಾಡುವನು. ಆತುಮನಂತರ ಪರವನರಿದಡೆ ಆತನೆ ಯೋಗಿ ; ಆತನ ಪಾದಕ್ಕೆ ಶರಣೆಂಬೆನಯ್ಯಾ ಚೆನ್ನಮಲ್ಲಿಕಾರ್ಜುನಾ.