Transclusion_Status_Detection_Tool

ಆದಿಯಲ್ಲಿ ಶಿವತತ್ವದಲ್ಲಿ ರೇಣುಕನುದಯವಾಗದಿರ್ದಡೆ,

ವಿಕಿಸೋರ್ಸ್ದಿಂದ
ನ್ಯಾವಿಗೇಷನ್‌ಗೆ ಹೋಗು ಹುಡುಕಲು ಹೋಗು



Pages   (key to Page Status)   


ಆದಿಯಲ್ಲಿ ಶಿವತತ್ವದಲ್ಲಿ ರೇಣುಕನುದಯವಾಗದಿರ್ದಡೆ
ಇಲ್ಲಿ ಶಿವಲಿಂಗದಲ್ಲಿ ಉದಯವಾದ ಪರಿಯೆಂತೋ? ಆ ಶಿವನಲ್ಲಿಯೆ ಹುಟ್ಟಿ ಶಿವನಲ್ಲಿಯೇ ಲಯವಾದ ರೇವಣಸಿದ್ಧೇಶ್ವರನು
ಅನಾದಿಮುಕ್ತನಲ್ಲ
ಅವಾಂತರಮುಕ್ತರೆಂಬ ಅಜ್ಞಾನಿಗಳಿಗೆ ನಾಯಕನರಕ ತಪ್ಪದು. ಸಕಲಕೋಟಿ ಬ್ರಹ್ಮಾಂಡಕ್ಕಾಧಾರಕಾರಣವಾಗಿಯು ಸಮಸ್ತ ಲೋಕಂಗಳ ಪವಿತ್ರಕಾರಣವಾಗಿಯು ಪರಮೇಶ್ವರನ ನಿಜಚಿನ್ಮಯಮಪ್ಪ ಊಧ್ರ್ವಮುಖದಲ್ಲಿ ಚಿತ್ಕಲಾ ಸ್ವರೂಪರಪ್ಪ ರುದ್ರಗಣಂಗಳುದಯವಾದರು ನೋಡ. ಆ ರುದ್ರಗಣಂಗಳು ಮತ್ತೂ ಜಗತ್ಪಾವನ ಕಾರಣ ಮತ್ರ್ಯದಲ್ಲಿ ಅವತರಿಸಿದಡೆ
ಅದೇನು ಕಾರಣ ಉದಯವಾದರು ವಾಸನಾಗುಣವಿಲ್ಲದೆ ಎಂದು ಸಂದೇಹಿಸುವ ಅವಲಕ್ಷಣ ನಾಯ ನಾಲಗೆಯ
ಯಮದೂತರು ಕೀಳದೆ ಮಾಣ್ಬರೆ? ಇವರಿಂಗೆ ನಾಯಕನರಕ ತಪ್ಪದು ಕಾಣಾ
ಎಲೆ ಶಿವನೆ ನೀ ಸಾಕ್ಷಿಯಾಗಿ
ಮಹಾಲಿಂಗಗುರು ಶಿವಸಿದ್ಧೇಶ್ವರ ಪ್ರಭುವೇ.