ವಿಷಯಕ್ಕೆ ಹೋಗು

ಆಶೆಯಾಮಿಷವಳಿದು, ಹುಸಿ ವಿಷಯಂಗಳೆಲ್ಲ

ವಿಕಿಸೋರ್ಸ್ದಿಂದ


ಶೀರ್ಷಿಕೆ: vachana saahitya
ವರ್ಷ: 1130-1160 AD
ಪ್ರಕಾಶಕರು: anubhava mantapa
ಮೂಲ: vachana saahitya

ಆಶೆಯಾಮಿಷವಳಿದು
ಹುಸಿ ವಿಷಯಂಗಳೆಲ್ಲ ಹಿಂಗಿ
ಸಂಶಯ ಸಂಬಂಧ ವಿಸಂಬಂಧವಾಯಿತ್ತು ನೋಡಾ. ಎನ್ನ ಮನದೊಳಗೆ ಘನಪರಿಣಾಮವ ಕಂಡು ಮನ ಮಗ್ನವಾಯಿತ್ತಯ್ಯಾ. ಚೆನ್ನಮಲ್ಲಿಕಾರ್ಜುನಾ
ನಿಮ್ಮ ಶರಣ ಪ್ರಭುದೇವರ ಕರುಣದಿಂದ ಬದುಕಿದೆನಯ್ಯಾ.