ಆಸುವಳಿದ ಕಾಯದಂತೆ ದೆಸೆಗೆಟ್ಟಿನಯ್ಯ

ವಿಕಿಸೋರ್ಸ್ದಿಂದ



Pages   (key to Page Status)   


ಆಸುವಳಿದ ಕಾಯದಂತೆ ದೆಸೆಗೆಟ್ಟಿನಯ್ಯ ದೆಸೆಗೆಟ್ಟಿನಯ್ಯ. ಅದೇನು ಕಾರಣವೆಂದಡೆ: ಪಶುಪತಿಯ ಭಕ್ತಿ ವಿಶ್ವಾಸವಿಲ್ಲದೆ ವಿಷಯಾತುರನಾಗಿರ್ದೆನಯ್ಯ. ಇದು ಕಾರಣ
ಎನ್ನ ಸಂಸಾರವಿಷಯಂಗಳ ಮಾಣಿಸಿ ಭಕ್ತನೆಂದೆನಿಸಯ್ಯಾ
ಮಹಾಲಿಂಗಗುರು ಶಿವಸಿದ್ಧೇಶ್ವರ ಪ್ರಭುವೇ.