ಆ ಮೂಲಮಂತ್ರಮೂರ್ತಿಯ ನಿಲುಕಡೆಯ

ವಿಕಿಸೋರ್ಸ್ದಿಂದ



Pages   (key to Page Status)   


ಆ ಮೂಲಮಂತ್ರಮೂರ್ತಿಯ ನಿಲುಕಡೆಯ ಕೇಳಿರಯ್ಯ ಶರಣಗಣಂಗಳೆ; ಬ್ರಹ್ಮಾಂಡ ಮಧ್ಯದಲ್ಲಿ ಪಿಂಡಾಕೃತಿಯ ಧರಿಸಿ
ಆ ಪೂರ್ವಾಶ್ರಯ ಸ್ವರೂಪವಾದ ಪಿಂಡಬ್ರಹ್ಮಾಂಡಗಳ ಜೀವನವರ್ತನ_ ದುರ್ಮಾರ್ಗ_ದುರ್ನಡತೆ_ದುರಾಚಾರ_ದುರ್ಗುಣಂಗಳ ತ್ಯಜಿಸಿ
ಗುರು ಲಿಂಗ ಜಂಗಮ ಭಕ್ತ ಮಹೇಶ್ವರ ಪ್ರಸಾದಿ ಪ್ರಾಣಲಿಂಗಿ
ಶರಣ ಐಕ್ಯಗಣಂಗಳಲ್ಲಿ ಒಪ್ಪುತಿರ್ಪರು ನೋಡಾ
_ ನಿರವಯ ಶೂನ್ಯಲಿಂಗಮೂರ್ತಿ ಗುಹೇಶ್ವರಲಿಂಗವು ಚೆನ್ನಬಸವಣ್ಣ.