ಇವು ಮೂರೂ ನಿತ್ಯವಾದಡೆ,

ವಿಕಿಸೋರ್ಸ್ದಿಂದ



Pages   (key to Page Status)   


ಇವು ಮೂರೂ ನಿತ್ಯವಾದಡೆ
ಮಾಯೆಯೂ ಆತ್ಮನು ಉತ್ಪತ್ತಿ ಸ್ಥಿತಿ ಪ್ರಳಯಕ್ಕೊಳಗಾಗುತ್ತಿಪ್ಪವು ನೋಡಾ. ಶಿವನೆ ಉತ್ಪತ್ತಿ ಸ್ಥಿತಿ ಪ್ರಳಯರಹಿತನಾಗಿ ನಿತ್ಯನಾಗಿಪ್ಪನು ನೋಡಾ. ಇದು ಕಾರಣ
ಅನಿತ್ಯವಾದ ಪಶುಪಾಶಂಗಳ ನಿತ್ಯವೆಂಬುದು ಅದು ಅಜ್ಞಾನ ನೋಡಾ. ಶಿವಜ್ಞಾನೋದಯದಿಂದ ತಿಳಿದುನೋಡಿದರೆ
ಶಿವತತ್ವವೊಂದೇ ನಿತ್ಯವು; ಉಳಿದವೆಲ್ಲವು ಅನಿತ್ಯ ಕಾಣ. ಹೀಂಗೆಂದು ಕಂಡ ಕಾಣಿಕೆ ನೀನೇ ನೋಡಾ
ಮಹಾಲಿಂಗಗುರು ಶಿವಸಿದ್ಧೇಶ್ವರ ಪ್ರಭುವೇ.