ಉಂಡೆನುಟ್ಟೆನೆಂಬ ಸಂದೇಹ ನಿನಗೇಕಯ್ಯಾ?
ಗೋಚರ
ಲೇಖಕರು: ಅಲ್ಲಮ ಪ್ರಭು
ಶೀರ್ಷಿಕೆ: vachana saahitya
ವರ್ಷ: 1120-1160 AD
ಪ್ರಕಾಶಕರು: anubhava mantapa
ಮೂಲ: vachana saahitya
ಪುಟಗಳು: ಇಲ್ಲಿನ ಪುಟಗಳು
ಉಂಡೆನುಟ್ಟೆನೆಂಬ ಸಂದೇಹ ನಿನಗೇಕಯ್ಯಾ? ಉಂಬುದೆ ಅಗ್ನಿ? ಉಡುವುದೆ ಪೃಥ್ವಿ? ನೀನೆಂದು ಉಂಡೆ? ನಾನೆಂದು ಕಂಡೆ? ಉಣ್ಣದೆ ಉಡದೆ ಹೊಗೆಯ ಕೈಯಲ್ಲಿ ಸತ್ತೆನೆಂಬ ಅಂಜಿಕೆ ನಿನಗೆ ಬೇಡ
ಅಂಜದಿರು
_ ಗುಹೇಶ್ವರಾ ನಿನಗಾವ ನಾಚಿಕೆಯೂ ಇಲ್ಲ.