ಉದಯಾಸ್ತಮಾನವೆನ್ನ ಬೆಂದ ಬಸುರಿಂಗೆ ಕುದಿಯಲಲ್ಲದೆ
ಗೋಚರ
ಲೇಖಕರು: Basavanna
ಶೀರ್ಷಿಕೆ: vachana saahitya
ವರ್ಷ: 1191 AD
ಪ್ರಕಾಶಕರು: anubhava mantapa
ಮೂಲ: vachana saahitya
ಪುಟಗಳು: ಇಲ್ಲಿನ ಪುಟಗಳು
ಉದಯಾಸ್ತಮಾನವೆನ್ನ ಬೆಂದ ಬಸುರಿಂಗೆ ಕುದಿಯಲಲ್ಲದೆ, ನಿಮ್ಮ ನೆನೆಯಲು ತೆರಹಿಲ್ಲಯ್ಯಾ. ಎಂತೋ ಲಿಂಗ ತಂದೆ, ಎಂತಯ್ಯಾ ಎನ್ನ ಪೂರ್ವಲಿಖಿತ ಬೆರಣಿಯನಾಯಲಲ್ಲದೆ ಅಟ್ಟುಣ್ಣ ತೆರಹಿಲ್ಲೆನಗೆ, ನೀ ಕರುಣಿಸು, ಕೂಡಲಸಂಗಮದೇವಾ. 271
ಉದಯಾಸ್ತಮಾನವೆನ್ನ ಬೆಂದ ಬಸುರಿಂಗೆ ಕುದಿಯಲಲ್ಲದೆ
ನಿಮ್ಮ ನೆನೆಯಲು ತೆರಹಿಲ್ಲಯ್ಯಾ. ಎಂತೋ ಲಿಂಗ ತಂದೆ
ಎಂತಯ್ಯಾ ಎನ್ನ ಪೂರ್ವಲಿಖಿತ ಬೆರಣಿಯನಾಯಲಲ್ಲದೆ ಅಟ್ಟುಣ್ಣ ತೆರಹಿಲ್ಲೆನಗೆ
ನೀ ಕರುಣಿಸು
ಕೂಡಲಸಂಗಮದೇವಾ. 271