Transclusion_Status_Detection_Tool

ಊರೊಳಗೆ ಆರುಮಂಟಪವ ಕಂಡೆನು.

ವಿಕಿಸೋರ್ಸ್ದಿಂದ
ನ್ಯಾವಿಗೇಷನ್‌ಗೆ ಹೋಗು ಹುಡುಕಲು ಹೋಗು



Pages   (key to Page Status)   


ಊರೊಳಗೆ ಆರುಮಂಟಪವ ಕಂಡೆನು. ಐವತ್ತೆರಡು ಎಸಳಿಂದ ರಚಿಸುತ್ತಿಪ್ಪುದಯ್ಯ. ಎಸಳೆಸಳು ತಪ್ಪದೆ ಅಕ್ಷರ ಲಿಪಿಯನೇ ಕಂಡು ಅಕ್ಷರ ಲಿಪಿಯ ಹೆಸರ ಕಲ್ಪಿತ ಲಿಪಿಯನೇ ತೊಡೆದು ನಿರ್ವಿಕಲ್ಪ ನಿತ್ಯಾತ್ಮಕನಾದೆನಯ್ಯ. ಆರು ಮಂಟಪವನಳಿದು ಮೂರು ಕೋಣೆಯ ಕೆಡಿಸಿ ಸಾವಿರೆಸಳ ಮಂಟಪವ ಹೊಗಲಾಗಿ ಸಾವು ತಪ್ಪುವುದೆಂಬೆನಯ್ಯಾ
ಮಹಾಲಿಂಗಗುರು ಶಿವಸಿದ್ಧೇಶ್ವರ ಪ್ರಭುವೇ.