ಎಂಟು ನೆಲೆಯ ಮಣಿಮಾಡದ
ಗೋಚರ
ಲೇಖಕರು: ಅಲ್ಲಮ ಪ್ರಭು
ಶೀರ್ಷಿಕೆ: vachana saahitya
ವರ್ಷ: 1120-1160 AD
ಪ್ರಕಾಶಕರು: anubhava mantapa
ಮೂಲ: vachana saahitya
ಪುಟಗಳು: ಇಲ್ಲಿನ ಪುಟಗಳು
ಎಂಟು ನೆಲೆಯ ಮಣಿಮಾಡದ ಮಂಟಪದ ಮೇಲೆ
ಏಳು ವಶ್ಯ ಕನ್ನಿಕೆಯರು
ಮಹಾಲಿಂಗಕ್ಕೆ ಮಾಣಿಕದಾರತಿಯನೆತ್ತಿದರಲ್ಲಾ ! ಚಾಮರಂಗಳು ಬೀಸದೆ
ಮಾಣಿಕಸೂಸಕ ಕೆದರದೆ ಅಧರಪಟಂಗಳು ಹಳಚದೆ
ಸ್ವಯಲಿಂಗಾರ್ಚನೆಯ ಮಾಡುವಲ್ಲಿ ಪ್ರಸಾದಕ್ಕೆ ಕರುಣದಿಂ ದಯಮಾಡೈ (ದಯಮಾಡಿಸೈ?) ಗುಹೇಶ್ವರಾ.