ಎಂಬತ್ತೆಂಟು ಪವಾಡವ ಮೆರೆದು ಹಗರಣದ ಚೋಹದಂತಾಯಿತೆನ್ನ ಭಕ್ತಿ

ವಿಕಿಸೋರ್ಸ್ದಿಂದ


Pages   (key to Page Status)   

ಎಂಬತ್ತೆಂಟು ಪವಾಡವ ಮೆರೆದು ಹಗರಣದ ಚೋಹದಂತಾಯಿತೆನ್ನ ಭಕ್ತಿ. ತನುವಿನೊಳಗೆ ಮನ ಸಿಲುಕದೆ ಮನದೊಳಗೆ ತನು ಸಿಲುಕದೆ ತನು ಅಲ್ಲಮನಲ್ಲಿ ಸಿಲುಕಿತ್ತು
ಮನ ಚೆನ್ನಬಸವಣ್ಣನಲ್ಲಿ ಸಿಲುಕಿತ್ತು. ನಾನೇತರಲ್ಲಿ ನೆನೆವೆನಯ್ಯಾ
ಕೂಡಲಸಂಗಮದೇವಾ