Transclusion_Status_Detection_Tool

ಎನ್ನ ಪ್ರಾಣನೊಳಗೆ ಹೂಳಿರ್ದ

ವಿಕಿಸೋರ್ಸ್ದಿಂದ
ನ್ಯಾವಿಗೇಷನ್‌ಗೆ ಹೋಗು ಹುಡುಕಲು ಹೋಗು



Pages   (key to Page Status)   


ಎನ್ನ ಪ್ರಾಣನೊಳಗೆ ಹೂಳಿರ್ದ ಪರಮಕಳೆಯ ತೆಗದು ಶಿವಲಿಂಗಮೂರ್ತಿಯ ಮಾಡಿ ಎನ್ನ ಕರಸ್ಥಲಕ್ಕೆ ಕೊಟ್ಟನಯ್ಯ ಶ್ರೀಗುರು. ಆ ಲಿಂಗವು ಸರ್ವಾವಸ್ಥೆಯಲ್ಲಿಯು ಅಂಗವ ಬಿಟ್ಟು ಅಗಲಲಾಗದುಯೆಂದು ನಿರೂಪಿಸಿದನಯ್ಯ ಶ್ರೀಗುರು. ಇದು ಕಾರಣ
ಅಂಗವ ಬಿಟ್ಟು ಲಿಂಗ ನಿಮಿಷಾರ್ಧವಗಲಿದಡೆ
ನಾಯಕನರಕ ತಪ್ಪದಯ್ಯಾ
ಮಹಾಲಿಂಗಗುರು ಶಿವಸಿದ್ಧೇಶ್ವರ ಪ್ರಭುವೇ.