ಕಣ್ಗೆ ಕಾಬಡೆ ರೂಪಲ್ಲ,
ಗೋಚರ
ಲೇಖಕರು: ಅಲ್ಲಮ ಪ್ರಭು
ಶೀರ್ಷಿಕೆ: vachana saahitya
ವರ್ಷ: 1120-1160 AD
ಪ್ರಕಾಶಕರು: anubhava mantapa
ಮೂಲ: vachana saahitya
ಪುಟಗಳು: ಇಲ್ಲಿನ ಪುಟಗಳು
ಕಣ್ಗೆ ಕಾಬಡೆ ರೂಪಲ್ಲ
ಕೈಗೆ ಸಿಲುಕವಡೆ ದೇಹಿಯಲ್ಲ. ನಡೆವಡೆ ಗಮನಿಯಲ್ಲ
ನುಡಿವಡೆ ವಾಚಾಳನಲ್ಲ. ನಿಂದಿಸಿದಡೆ ಹಗೆಯಲ್ಲ
ಹೊಗಳಿದವರಿಗೆ ಕೆಳೆಯಲ್ಲ. ಗುಹೇಶ್ವರನ ನಿಲುವು ಮಾತಿನ ಮಾಲೆಗೆ ಸಿಲುಕುವುದೆ ? ಸಿದ್ಧರಾಮಯ್ಯ ನೀನು ಮರುಳಾದೆಯಲ್ಲಾ