Pages (key to Page Status)
ಕಬ್ಬು ಬೆಳೆವುದಯ್ಯ ಕರಿಯ ಭೂಮಿಯಿದ್ದಲ್ಲಿ ಉಬ್ಬುಬ್ಬಿ ಬೆಳೆವುದಯ್ಯ ಜಲ ಪ್ರಮಾಣವಿರ್ದಲ್ಲಿ ದಾರಿದ್ರ್ಯವಿದ್ದಲ್ಲಿ ನಿದ್ರೆ ಬೆಳೆವುದಯ್ಯ ನಮ್ಮ ಶಿವನ ಸಲೆ ಸಂದ ಶರಣರಾದ ಹಿರಿಯರಿದ್ದಲ್ಲಿ ಬುದ್ಧಿ ಬೆಳವುದಯ್ಯ ಜಟ್ಟಿ ಮಾಸಾಳರಿರ್ದಲ್ಲಿ ಕಾಳಗ ಘನವನಪ್ಪುದಯ್ಯ ಇಷ್ಟ ಕಂಡು ಬೆರಗಾದ ನಮ್ಮ ಗುಹೇಶ್ವರ.