ಕರ್ಮವೆ ಪ್ರಾಣವೆಂದು ಮಾಡುವಾಗ

ವಿಕಿಸೋರ್ಸ್ದಿಂದ



Pages   (key to Page Status)   


ಕರ್ಮವೆ ಪ್ರಾಣವೆಂದು ಮಾಡುವಾಗ ಜ್ಞಾನವನರಿವ ನೆಲೆ ಶುದ್ಧವಿನ್ನಾವುದು ? ಸಾವನ್ನಕ್ಕ ಸಾಧನೆಯ ಮಾಡಿ ಕಾದವಾಠಾವಿನ್ನಾವುದು ? ಅರಿದುದ ನೇತಿಗಳೆದು; ಮೇಲರಿದುದ ಕರಿಗೊಳುತ್ತ ತುಷವ ನೀಗಿದ ತಂಡುಲದಂತೆ ಕಾಯದ ದೆಸೆ ಶುದ್ಧವಾಗಿರಬೇಕು
ಸಿದ್ಧರಾಮಯ್ಯಾ ಗುಹೇಶ್ವರಲಿಂಗವನರಿವುದಕ್ಕೆ.