ವಿಷಯಕ್ಕೆ ಹೋಗು

ಕಳನೇರಿ ಇಳಿವುದು ವೀರಂಗೆ

ವಿಕಿಸೋರ್ಸ್ದಿಂದ


ಶೀರ್ಷಿಕೆ: vachana saahitya
ವರ್ಷ: 1130-1160 AD
ಪ್ರಕಾಶಕರು: anubhava mantapa
ಮೂಲ: vachana saahitya

ಕಳನೇರಿ ಇಳಿವುದು ವೀರಂಗೆ ಮತವಲ್ಲ. ಶಿವಶರಣಂಗೆ ಹಿಮ್ಮೆಟ್ಟುವುದು ಪಥವಲ್ಲ. ಮನದೊಡೆಯ ಮನವನಿಂಬುಗೊಂಬನಯ್ಯಾ. ಏರಲಾಗದು ಶ್ರೀಪರ್ವತವ ಇಳಿದಡೆ ವ್ರತಕ್ಕೆ ಭಂಗ. ಕಳನೇರಿ ಕೈದು ಮರೆದಡೆ ಮಾರಂಕ ಚೆನ್ನಮಲ್ಲಿಕಾರ್ಜುನನಿಮ್ಮೈಗಾಣಲಿರಿವನು.