ಕವಿತ್ವಸಾಧಕರೆಲ್ಲರು ಕಳವಳಿಸಿ ಕೆಟ್ಟರು.

ವಿಕಿಸೋರ್ಸ್ದಿಂದ



Pages   (key to Page Status)   


ಕವಿತ್ವಸಾಧಕರೆಲ್ಲರು ಕಳವಳಿಸಿ ಕೆಟ್ಟರು. ವಿದ್ಯಾಸಾಧಕರೆಲ್ಲರು ಬುದ್ಧಿಹೀನರಾದರು. ಪವನ ಸಾಧಕರೆಲ್ಲರು ಹದ್ದು ಕಾಗೆಗಳಾದರು. ಜಲಸಾಧಕರೆಲ್ಲರು ಕಪ್ಪೆ ಮೀನಗಳಾದರು. ಅನ್ನಸಾಧಕರೆಲ್ಲರು ಭೂತಪ್ರಾಣಿಗಳಾದರು. ಬಸವಣ್ಣ
ಸದ್ಗುರುಸಾಧಕನಾಗಿ ಸ್ವಯಲಿಂಗವಾದ ಕಾಣಾ ಗುಹೇಶ್ವರಾ.