ಕಾಯಕ್ಲೇಶದಿಂದ ತನುಮನ ಬಳಲಿ

ವಿಕಿಸೋರ್ಸ್ದಿಂದ



Pages   (key to Page Status)   


ಕಾಯಕ್ಲೇಶದಿಂದ ತನುಮನ ಬಳಲಿ ಧನವ ಗಳಿಸಿ ಗುರುಲಿಂಗಜಂಗಮಕ್ಕೆ ವೆಚ್ಚಿಸಿ ದಾಸೋಹವ ಮಾಡುವ ಭಕ್ತನ ಪಾದವ ತೋರಯ್ಯಾ
ನಿಮ್ಮ ಧರ್ಮ. ಅದೇಕೆಂದಡೆ; ಆತನ ತನು ಶುದ್ಧ ಆತನ ಮನ ಶುದ್ಧ. ಆತನ ನಡೆ ನುಡಿ ಪಾವನ. ಆತಂಗೆ ಉಪದೇಶವ ಮಾಡಿದ ಗುರು ನಿರಂಜನ ನಿರಾಮಯ. ಅಂತಹ ಭಕ್ತನ ಕಾಯವೆ ಕೈಲಾಸವೆಂದು ಹೊಕ್ಕು ಲಿಂಗಾರ್ಚನೆಯ ಕಾಡುವ ಜಂಗಮ ಜಗತ್ಪಾವನ. ಇಂತಿವರಿಗೆ ನಮೋ ನಮೋ ಎಂಬೆ ಕೂಡಲಚೆನ್ನಸಂಗಯ್ಯ