ಕಾಯಗುಣವಳಿದು ಜೀವನ್ಮುಕ್ತನಾದ ಬಳಿಕ

ವಿಕಿಸೋರ್ಸ್ದಿಂದ



Pages   (key to Page Status)   


ಕಾಯಗುಣವಳಿದು ಜೀವನ್ಮುಕ್ತನಾದ ಬಳಿಕ ಸಮ್ಯಕ್‍ಜ್ಞಾನವೆಂಬ ಶಾಂತಿ ದೊರೆಕೊಂಡಿತ್ತು ನೋಡಿರೆ ! ಅಂತರಂಗ ಬಹಿರಂಗವೆಂಬುದನು ಅರಿಯನಾಗಿ ದ್ವೈತಾದ್ವೈತವ ನೀಕರಿಸಿ
ನಿರ್ವಾಣ ನಿಷ್ಪತಿಯಾಗಿ
ಗುಹೇಶ್ವರಾ ನಿಮ್ಮ ಶರಣನನುಪಮ ಸುಖಿಯಾಗಿರ್ದನು.