ಕಾಯದ ಕಳವಳಕ್ಕಂಜಿ ಪ್ರಾಣ

ವಿಕಿಸೋರ್ಸ್ದಿಂದ



Pages   (key to Page Status)   


ಕಾಯದ ಕಳವಳಕ್ಕಂಜಿ ಪ್ರಾಣ ಹೋದಲ್ಲಿ
ಭವ ಹಿಂಗದು
ಪ್ರಕೃತಿ ಬಿಡದು. ವಾಯಕ್ಕಾದಡೆ ಸತ್ತು ದೇವರ ಕೂಡಿಹೆವೆಂಬರು
ಈ ವಾಯದ ಮಾತಿಂಗೆ ಆನು ಬೆರಗಾದೆನು. ಕಾಯವಿದ್ದಲ್ಲಿ ಸಾಯದ ಸಾವ ಬಲ್ಲಡೆ ಬೇರಿಲ್ಲ
ಗುಹೇಶ್ವರ ತಾನೆ !