ವಿಷಯಕ್ಕೆ ಹೋಗು

ಕಾಯದ ಕಳವಳವ ಕೆಡಿಸಿ,

ವಿಕಿಸೋರ್ಸ್ದಿಂದ


ಶೀರ್ಷಿಕೆ: vachana saahitya
ವರ್ಷ: 1130-1160 AD
ಪ್ರಕಾಶಕರು: anubhava mantapa
ಮೂಲ: vachana saahitya

ಕಾಯದ ಕಳವಳವ ಕೆಡಿಸಿ
ಮನದ ಮಾಯೆಯ ಮಾಣಿಸಿ
ಎನ್ನ ಹರಣವ ಮೇಲೆತ್ತಿ ಸಲಹಿದೆಯಯ್ಯಾ. ಶಿವಶಿವಾ
ಎನ್ನ ಭವಬಂಧನವ ಬಿಡಿಸಿ
ನಿಮ್ಮತ್ತ ತೋರಿದ ಘನವನುಪಮಿಸಬಾರದಯ್ಯಾ. ಇರುಳೋಸರಿಸಿದ ಜಕ್ಕವಕ್ಕಿಯಂತೆ ನಾನಿಂದು ನಿಮ್ಮ ಶ್ರೀಪಾದವನಿಂಬುಗೊಂಡು ಸುಖದೊಳೋಲಾಡುವೆನಯ್ಯಾ
ಚೆನ್ನಮಲ್ಲಿಕಾರ್ಜುನಾ.