ಕಾಯವೆಂಬ ಗ್ರಾಮದೊಳಗೊಂದು ಉದರಾಗ್ನಿ

ವಿಕಿಸೋರ್ಸ್ದಿಂದ



Pages   (key to Page Status)   


ಕಾಯವೆಂಬ ಗ್ರಾಮದೊಳಗೊಂದು ಉದರಾಗ್ನಿ ಹಸಿವು ತೃಷೆ ಅನ್ನ ಪಾನಾದಿಗಳಾಹುತಿಯೆಂಬ ಹೋಮದ ಕುಳಿಯಿದ್ದು
ನೇಮಾನೇಮಂಗಳನೆಲ್ಲ ಉಳಿದು ಆಹುತಿಯನಿಕ್ಕಿದರು. ಕೃಚ್ಚ್ರ ಚಾಂದ್ರಾಯಣ ಮೊದಲಾದ ಷೋಡಶ ಕರ್ಮವೆಂಬ ತಪ
ಎರಡುನೂರಹದಿನಾರು ತೆರೆದ ನೇಮ ಅರವತ್ತಾರು ಶೀಲ
ಎಂಬತ್ತೆಂಟು ವ್ರತವೆಂಬೀ ಚತುರ್ವಿಧ ಪ್ರಾಣಘಾತಕದೊಳಿಲ್ಲ ಗುಹೇಶ್ವರ ನಿಮ್ಮ ಶರಣ ಕಂಡೆಯ್ಯ.