ವಿಷಯಕ್ಕೆ ಹೋಗು

ಕಾಲದಿಂದ ಕಡೆಮುಟ್ಟ ಮಾಡಿದ

ವಿಕಿಸೋರ್ಸ್ದಿಂದ


ಲೇಖಕರು: ಬಸವಣ್ಣ
ಶೀರ್ಷಿಕೆ: vachana saahitya
ವರ್ಷ: 1191 AD
ಪ್ರಕಾಶಕರು: anubhava mantapa
ಮೂಲ: vachana saahitya

ಕಾಲದಿಂದ ಕಡೆಮುಟ್ಟ ಮಾಡಿದ ಲೇಸು ಒಂದು ದಿನ ಉದಾಸೀನವ ಮಾಡಿದಡೆ ಅದೆಲ್ಲವು ವ್ಯರ್ಥವಾಗಿ ಹೋಹುದು ಕೇಳಯ್ಯಾ. ಸಾವಿರ ನೋಂಪಿಯ ನೋಂತು ಒಂದು ಬಾರಿ ಹಾದರವನಾಡಿದಡೆ ಆ ನೋಂಪಿಯೆಲ್ಲವು ನೀರಲ್ಲಿ ನೆರೆದು ಹೋಹಂತೆ ಕೇಳಯ್ಯಾ. ನಾನು ಎಷ್ಟು ಭಕ್ತಿಯ ಮಾಡಿದಡೇನು ನಿಮ್ಮ ಶರಣರ ಮನವೆಳ್ಳನಿತು ನೊಂದಡೆ
ಎನ್ನ ಭಕ್ತಿಯಭಿಮಾನ ಹೋಯಿತ್ತಯ್ಯಾ. ಕೂಡಲಸಂಗಮದೇವಾ
ನಿಮ್ಮ ಶರಣರ ಮುನಿಸನಾವಪರಿಯಲ್ಲಿ ತಿಳುಹುವೆ ಹೇಳಾ
ಎಲೆ ಪ್ರಭುವೆ.