ಕಿಚ್ಚು ಬಯಲೆಂದಡದು ನಿರವಯವಕೆ

ವಿಕಿಸೋರ್ಸ್ದಿಂದ



Pages   (key to Page Status)   


ಕಿಚ್ಚು ಬಯಲೆಂದಡದು ನಿರವಯವಕೆ ಹತ್ತಿ ಹೊತ್ತಿದುದುಂಟೆ ? ಅರಿವು ನಿಜವೆಂದಡೆ ಅಡಗುವುದಕ್ಕೊಂದು ನಾಮ ಉಂಟು. ಅಗ್ನಿರೂಪಿನಲ್ಲಿ ಹುಟ್ಟಿ ಆ ರೂಪ ದಗ್ಧವ ಮಾಡಿದಲ್ಲದೆ ತನ್ನ ಹೊದ್ದಿಗೆ ಕೆಡದು. ಆ ಉಭಯವನರಿವನ್ನಬರ ಕೈಯ ಕುರುಹು
ಅರಿವನ ಜ್ಞಾನ ಪರಿಪೂರ್ಣವಾಗಿರಬೇಕು. ನಮ್ಮ ಗುಹೇಶ್ವರಲಿಂಗದಲ್ಲಿ ಆ ಉಭಯವ ತಿಳಿವನ್ನಬರ ತನ್ನ ಹಿಂಗಿರಬೇಕು ಕಾಣಾ
ಎಲೆ ಅಂಬಿಗರ ಚೌಡಯ್ಯ.