ಕೇಶವನಲ್ಲದೆ ಅತಃಪರದೈವವಿಲ್ಲೆಂದು ವೇದವ್ಯಾಸಮುನಿ

ವಿಕಿಸೋರ್ಸ್ದಿಂದ


Pages   (key to Page Status)   

ಕೇಶವನಲ್ಲದೆ ಅತಃಪರದೈವವಿಲ್ಲೆಂದು ವೇದವ್ಯಾಸಮುನಿ ಭಂಗಬಟ್ಟುದನರಿಯಿರೆ ! `ಅಹಂ ಸರ್ವಜಗತ್‍ಕರ್ತಾ ಮಮ ಕರ್ತಾ ಮಹೇಶ್ವರಃ ಎಂದು ವಿಷ್ಣು ಹೇಳಿದ ವಚನವ ಮರೆದಿರಲ್ಲಾ ! ಕೂಡಲಸಂಗಮದೇವನು ದಕ್ಷನ ಯಜ್ಞವ ಕೆಡಿಸಿದುದ ಮರೆದಿರಲ್ಲಾ !