ಕ್ರಿಯಾಜ್ಞಾನಸಂಬಂಧವೆಂದು ನುಡಿವರು ಕ್ರಿಯಾಜ್ಞಾನಸಂಬಂಧವೆಂತಿರ್ಪುದೆಂದರಿಯರು.

ವಿಕಿಸೋರ್ಸ್ದಿಂದ



Pages   (key to Page Status)   

ಕ್ರಿಯಾಜ್ಞಾನಸಂಬಂಧವೆಂದು ನುಡಿವರು_ ಕ್ರಿಯಾಜ್ಞಾನಸಂಬಂಧವೆಂತಿರ್ಪುದೆಂದರಿಯರು. ಕ್ರೀಯಲ್ಲಿ ಅಂಗಲಿಂಗಸಂಬಂಧವನರಿಯರು
ಜ್ಞಾನದಲ್ಲಿ ಲಿಂಗಜಂಗಮಸಂಬಂಧವನರಿಯರು. ಕ್ರೀಯಲ್ಲಿ ಅರ್ಪಿತಪ್ರಸಾದಸಂಬಂಧವನರಿದು
ಜ್ಞಾನದಲ್ಲಿ ತೃಪ್ತಿಪರಿಣಾಮವನರಿದು. ಕ್ರೀಯೊಳಗಿರ್ದು ಜ್ಞಾನಸಂಪನ್ನನಾಗಿರಬಲ್ಲ ಶರಣಂಗೆ ಕ್ರಿಯೆಯೆ ತನು
ಜ್ಞಾನವೆ ಪ್ರಾಣ. ತನು ಲಿಂಗವಾಗಿ
ಪ್ರಾಣ ಜಂಗಮವಾಗಿ
ತನುವ ಸಯಮಾಡಿ
ಪ್ರಾಣವ ಲಿಂಗಜಂಗಮಕ್ಕರ್ಪಿಸಿ
ನಿರಂತರ ಸಾವಧಾನಿಯಾಗಿರಬಲ್ಲ ಪ್ರಸಾದಿಗಳ ಎನಗೊಮ್ಮೆ ತೋರಿ ಸಲಹಾ
ಕೂಡಲಸಂಗಮದೇವಾ.