ಗುರುಕಾರುಣ್ಯವಿಡಿದು ಬಂದ ತನ್ನ

ವಿಕಿಸೋರ್ಸ್ದಿಂದ


Pages   (key to Page Status)   

ಗುರುಕಾರುಣ್ಯವಿಡಿದು ಬಂದ ತನ್ನ ಕರಸ್ಥಲದ ಇಷ್ಟಲಿಂಗದಲ್ಲಿ ದೃಷ್ಟಿ ನಟ್ಟು
ಭಾವಸಂಪನ್ನನಾಗಿ ನಿಂದು
ನಿಜವನೈದಲರಿಯದೆ ಪವನಮುಖದಿಂದ ಲಿಂಗವನರಿದೆನೆಂಬುದೆ ದ್ರೋಹ. ಇಡಾ ಪಿಂಗಳ ಸುಷುಮ್ನಾನಾಳವ ಬಲಿದು ಲಿಂಗವ ಕಂಡೆಹೆನೆಂಬ ಕ್ರೂರಕರ್ಮಿಗಳನು ಕೂಡಲಸಂಗಯ್ಯ ಕೆಡಹಿ ಮೂಗಕೊಯ್ವ ಕಾಣಿರೊ.