ವಿಷಯಕ್ಕೆ ಹೋಗು

ಗುರುಭಕ್ತನಾದಲ್ಲಿ ತ್ರಿವಿಧಾಂಗ ಘಟಧರ್ಮವಳಿದು,

ವಿಕಿಸೋರ್ಸ್ದಿಂದ


ಶೀರ್ಷಿಕೆ: vachana saahitya
ವರ್ಷ: 1160 AD
ಪ್ರಕಾಶಕರು: anubhava mantapa
ಮೂಲ: vachana saahitya


ಗುರುಭಕ್ತನಾದಲ್ಲಿ ಘಟಧರ್ಮವಳಿದು
ಲಿಂಗಭಕ್ತನಾದಲ್ಲಿ ಸಂಚಲ ನಿಂದು
ಜಂಗಮಭಕ್ತನಾದಲ್ಲಿ ತ್ರಿವಿಧಾಂಗ ಸಲೆ ಸಂದು
ಇಂತೀ ತ್ರಿವಿಧಭಕ್ತಿಯಲ್ಲಿ ತ್ರಿಕರಣಶುದ್ಧನಾದ ಆತ್ಮಂಗೆ ಮತ್ರ್ಯ-ಕೈಲಾಸವೆಂಬ ಕಾಳುಮಾತಿಲ್ಲ. ಆತ ನಿತ್ಯಮುಕ್ತ ಎನ್ನಯ್ಯ ಚೆನ್ನರಾಮನಾಗಿ.