ಗುರು ನೆನೆದ ಕರುಣಿಸಿಕೊಟ್ಟ

ವಿಕಿಸೋರ್ಸ್ದಿಂದ



Pages   (key to Page Status)   


ಗುರು ಕರುಣಿಸಿಕೊಟ್ಟ ಮಂತ್ರವೆ ಸಕಲಬಯಕೆಯನುಂಟುಮಾಡುವುದಲ್ಲದೆ
ತನ್ನ ತಾ ನೆನೆದ ಮಂತ್ರವು ಸಿದ್ಧಿಯನುಂಟುಮಾಡದು ನೋಡಾ ! ಗುರುಕೊಟ್ಟ ಲಿಂಗವೆ ಮುಕ್ತಿಯನೀವುದಲ್ಲದೆ
ತನ್ನ ತಾನೆ ಕಟ್ಟಿಕೊಂಡ ಲಿಂಗವು ಮುಕ್ತಿಯನೀಯದು ನೋಡಾ ! ಇದು ಕಾರಣ
ಗುರೂಪದೇಶವ ಪಡೆಯಲರಿಯದೆ ಬರಿದೆ ಭಕ್ತರೆನಿಸಿಕೊಂಬ ಶೈವಮತದ ಭವಿಗಳಿಗೆ ಭವಜಾಲದಲ್ಲಿ ಬಪ್ಪುದು ತಪ್ಪದು ನೋಡಾ ಅಖಂಡೇಶ್ವರಾ.