ಜೈಮಿನಿ ಭಾರತ/ಹದಿನೇಳನೆಯ ಸಂಧಿ
ಹದಿನೇಳನೆಯ ಸಂಧಿ[ಸಂಪಾದಿಸಿ]
ಪದ್ಯ :-:ಸೂಚನೆ:[ಸಂಪಾದಿಸಿ]
ಸೂಚನೆ: ವಿನಯದಿಂದೈ ತಂದು ಕಾಣಲ್ಕೆ ಬಭ್ರುವಾ | ಹನನಂ ಜರೆದು ನರಂ ನೂಕಿದೊಡೆ ಬಳಿಕವಂ | ಕನಲಿ ಪಾರ್ಥನ ಚಾತುರಂಗದೊಳ್ ಕಾದಲ್ಕೆಸೇನೆಸಹಿತಿದಿರಾದನು|| |
[ಆವರಣದಲ್ಲಿ ಅರ್ಥ];=
|
ಪದ್ಯ :-:೧:[ಸಂಪಾದಿಸಿ]
ಭೂಭುಜಲಲಾಮ ಕೇಳಿಂದ್ರತನಯನ ತುರಗ | ಮಾಭೀಷಣನ ಸೀಮೆಯಂ ಕಳೆದು ಬರೆ ಮುಂದೆ || ಶೋಭಿಸಿತು ವರ್ಷಾಗಮಂ ಧರೆಯ ಬೇಸಗೆಯ ಬೇಸರಂ ತವೆ ತವಿಸುತೆ || |
[ಆವರಣದಲ್ಲಿ ಅರ್ಥ];=
|
ಪದ್ಯ :-:೨:[ಸಂಪಾದಿಸಿ]
ಎದ್ದುವು ಮುಗಿಲ್ಗಳೆಣ್ಣೆಸೆಗಳೊಳ್ ತರತರದೊ | ಳಿದ್ದುವು ಗಿರಿಗಳಂತೆ ಮಿಂಚಿದುವು ದಿಗ್ವಧುಗ | ಳುದ್ದಂಡದಿಂದೆ ಪರ್ಜನ್ಯನಂ ಸೆಣಸಿ ನೋಡುವಚಲಾಪಾಂಗದಂತೆ || |
[ಆವರಣದಲ್ಲಿ ಅರ್ಥ];=
|
ಪದ್ಯ :-:೩:[ಸಂಪಾದಿಸಿ]
ವರ ನೀಲಕಂಠ ನೃತ್ಯದಿನಂಧಕಾಸುರ ಸ | ಮರ ಧರಣಿಯಂ ಕುವಲಯಾನಂದಕರದ ಘನ | ಪರಿಶೋಭೆಯಿಂದೆ ಚಂದ್ರೋದಯವನಾಲೋಕ ಚಂಚಲೋದ್ಭಾಸದಿಂದ || |
[ಆವರಣದಲ್ಲಿ ಅರ್ಥ];=
|
ಪದ್ಯ :-:೪:[ಸಂಪಾದಿಸಿ]
ಜಾತ ನವ ಶಾಡ್ವಲದ ಸೊಂಪಿಡಿದೆಸೆವ ನೆಲದ | ಪೂತಸೆವ ಜಾಜಿಗಳ ವರಕುಟಜ ರಾಜಿಗಳ | ಕೇತಕಿಯ ಧೂಲಗಳ ಕೆದರುತಿಹ ಗಾಳಿಗಳಲಸದಿಂದ್ರಗೋಪಚಯದ || |
[ಆವರಣದಲ್ಲಿ ಅರ್ಥ];=
|
ಪದ್ಯ :-:೫:[ಸಂಪಾದಿಸಿ]
ತುಂಗ ನವಚಿತ್ರ ಮಯ ಸುಪ್ರಭಾಸುರ ಕಾರ್ಮು | ಕಂಗಳಿಂ ಸುರಕಾರ್ಮುಕಂಗಳಂ ವಿವಿಧ ವಾ | ದ್ಯಂಗಳ ಗಂಭೀರ ಘನ ಘೋಷಂಗಳಿಂದೆ ಘನಘೋಷಂಗಳಂ ನೆಗಳ್ದ || |
[ಆವರಣದಲ್ಲಿ ಅರ್ಥ];=
|
ಪದ್ಯ :-:೬:[ಸಂಪಾದಿಸಿ]
ಕ್ಷೋಣೀಂದ್ರ ಕೇಳರ್ಜುನನ ಕಣ್ಗೆ ಮಣಿಪುರಂ | ಕಾಣಿಸಿತು ಕನಕರಜತದ ಕೋಂಟೆ ಕೊತ್ತಳದ | ಮಾಣಿಕದ ವಜ್ರವೈಡೂರ್ಯ ಗೋಮೇಧಿಕದ ಮುಗಿಲಟ್ಟಳೆಯ ಸಾಲ್ಗಳ || |
[ಆವರಣದಲ್ಲಿ ಅರ್ಥ];=
|
ಪದ್ಯ :-:೭:[ಸಂಪಾದಿಸಿ]
ಪಗಲ ದೆಸೆಗಳುಕಿ ಪರೆದಿರ್ದ ಬೆಳ್ದಿಂಗಳೀ | ನಗರಮಂ ಪೊಕ್ಕು ವೆಂಟಣಿಸಿ ಮಾರ್ಮಲೆತಿರಲ್ | ಮಿಗೆ ಮೋಹರಿಸಿ ಬಂದು ಮುತ್ತಿಗೆಯನಿಕ್ಕಿ ಕೊಂಡಿರ್ಪೆಳವಿಸಿಲ್ಗಳೆನಲು || |
[ಆವರಣದಲ್ಲಿ ಅರ್ಥ];=
|
ಪದ್ಯ :-:೮:[ಸಂಪಾದಿಸಿ]
ಮೇರುಗಿರಿಯಂ ಜರೆವ ಕಾಂಚನದ ಗೋಪುರಂ | ತೋರಮೊಲೆ ರಾಜಮಾರ್ಗಂ ಬಾಹುಲತೆ ನೃಪಾ | ಗಾರಂ ಮುಖಾಂಬುಜಂ ಚಿತ್ರಿತಪತಾಕೆಗಳ್ ಚಲಿಸುವಳಕಾವಳಿಗಳು || |
[ಆವರಣದಲ್ಲಿ ಅರ್ಥ];=
|
ಪದ್ಯ :-:೯:[ಸಂಪಾದಿಸಿ]
ಕೋಟೆಗಾವಲ ಭಟರ ವಿವಿಧಾಯುಧಂಗಳ ಕ | ವಾಟರಕ್ಷೆಯ ಬಲದ ಸನ್ನಾಹಸಾಧನದ | ಕೂಟದತಿಭೀಕರದ ದುರ್ಗದಭಿಮಾನದೇವತೆ ಸಕಲಭೂವಲಯಕೆ || |
[ಆವರಣದಲ್ಲಿ ಅರ್ಥ];=
|
ಪದ್ಯ :-:೧೦:[ಸಂಪಾದಿಸಿ]
ತಂಡತಂಡದೊಳಾ ಪೊಳಲ ಪುಗುವ ಪೊರೆಮಡುವ | ಶುಂಡಾಲ ವಾಜಿಗಳ ಪುರಜನದ ಪರಿಜನದ | ಮಂಡಲಾಧಿಪರನಿಪ ಹಂಸಧ್ವಜಾತಿ ಭೂಭುಜರನುದಿನಂ ತಪ್ಪದೆ || |
[ಆವರಣದಲ್ಲಿ ಅರ್ಥ];=
|
ಪದ್ಯ :-:೧೧:[ಸಂಪಾದಿಸಿ]
ನೆಟ್ಟನೆ ಹಯಂ ಪೋಗಿ ವಹಿಲದಿಂ ಪೊಕ್ಕುದಾ | ಪಟ್ಟಣವನದರೊಡನೆ ನಡೆತಂದು ಪಾಳೆಯಂ | ಬಿಟ್ಟುದು ಪುರೋದ್ಯಾನವೀಧಿಗಳೊಳರ್ಜುನಂ ನಗರಮಂ ನೋಡಿ ನಗುತ || |
[ಆವರಣದಲ್ಲಿ ಅರ್ಥ];=
|
ಪದ್ಯ :-:೧೧:[ಸಂಪಾದಿಸಿ]
ನೀನರಿದುದಿಲ್ಲಲಾ ಪಾರ್ಥ ಮಣಿಪುರಮೆಂಬ | ರೀನಗರಮಂ ಬಭ್ರುವಾಹನಂ ಪ್ರಖ್ಯಾತ | ಭೂನಾಥನಿಲ್ಲಿಗರಸವನಿಪರೊಳಗ್ಗಳೆಯನಿವನ ಸಿದ್ಧಾಯಕಾಗಿ || |
[ಆವರಣದಲ್ಲಿ ಅರ್ಥ];=
|
ಪದ್ಯ :-:೧೩:[ಸಂಪಾದಿಸಿ]
ಈತಂಗೆ ಸಚಿವಂ ಸುಬುದ್ಧಿಯೆಂಬವನೋರ್ವ | ನಾತನೇ ಪಾಲಿಸುವನಿವನ ಭೂತಳಮಂ ನಿ | ಜಾತಿಶಯ ಧರ್ಮದಿಂದೆಳ್ಳನಿತು ದೋಷಮಿಲ್ಲದೆ ಸಾವಧಾನನಾಗಿ || |
[ಆವರಣದಲ್ಲಿ ಅರ್ಥ];=
|
ಪದ್ಯ :-:೧೪:[ಸಂಪಾದಿಸಿ]
ಒಂದು ಕೊಡಕೆಯ ಕಪ್ಪಿನಿಂದೆಸೆವ ತೇಜಿಗಳ್ | ಕುಂದೇಂದುಧವಳಾಂಗದಾನೆಗಳ್ ಮಣಿಮಯದ | ಪೊಂದೇರ್ಗಳಿನಿತೆಂದರಿಯರಿವನ ಕರಣಿಕರ್ ಮಿಕ್ಕ ರಥ ಕರಿ ಘಟೆಗಳ || |
[ಆವರಣದಲ್ಲಿ ಅರ್ಥ];=
|
ಪದ್ಯ :-:೧೫:[ಸಂಪಾದಿಸಿ]
ಈ ಪುರದೊಳಿರ್ಪಮಾನವರೆಲ್ಲರುಂ ಸದಾ | ಶ್ರೀಪತಿಯ ಭಜನೆಯಲ್ಲದೆ ಪೆರತರಿಯರತಿದ | ಯಾಪರರ್ ವೇದಾರ್ಥಕೋವಿದರ್ ಸತ್ಯವೃತಾಚಾರಸಂಪನ್ನರು || |
[ಆವರಣದಲ್ಲಿ ಅರ್ಥ];=
|
ಪದ್ಯ :-:೧೬:[ಸಂಪಾದಿಸಿ]
ಯೋಗಿಜನದಂತೆ ಮುಕ್ತಾಹಾರದಿಂ ಪೂಜ್ಯ | ಮಾಗಿಹುದು ಪಾತಾಳನಿಳಯದಂತಾವಗಂ | ಭೋಗಿಪವಿಲಾಸಮಂ ತಳೆದಿಹುದು ಸಂತತಂ ಗಾಂಧರ್ವಶಾಸ್ತ್ರದಂತೆ || |
[ಆವರಣದಲ್ಲಿ ಅರ್ಥ];=
|
ಪದ್ಯ :-:೧೭:[ಸಂಪಾದಿಸಿ]
ಇಲ್ಲಿ ಪುರುಷಸ್ತ್ರೀಯರೊರ್ವರುಂ ಪಾತಕಿಗ | ಳಲ್ಲದಿಹ ಕಾರಣಂ ಸಾನ್ನಿಧ್ಯದಿಂ ರಮಾ | ವಲ್ಲಭಂ ಪೊರೆವನೀ ನಗರಮಂ ತನಗಿದೆರಡನೆಯ ವೈಕುಂಠಮೆಂದು || |
[ಆವರಣದಲ್ಲಿ ಅರ್ಥ];=
|
ಪದ್ಯ :-:೧೮:[ಸಂಪಾದಿಸಿ]
ಭೂಲೋಲ ಕೇಳ್ ಮರಾಳಧ್ವಜನ ಮಾತನಿಂ | ತಾಲಿಸುವ ಪಾರ್ಥನ ಕಿರೀಟಾಗ್ರದೊಳ್ ಬಂದು | ಕಾಲೂರಿ ನಿಂದಿರ್ದುದೊಂದುಪರ್ದೇನೆಂಬೆನುತ್ಪಾತದದ್ಭುತವನು || |
[ಆವರಣದಲ್ಲಿ ಅರ್ಥ];=
|
ಪದ್ಯ :-:೧೯:[ಸಂಪಾದಿಸಿ]
ಇತ್ತಲೀ ತೆರದೊಳಿರುತಿರಲತ್ತಲಾ ಪುರದೊ | ಳುತ್ತಮಹಯಾಗಮವನೊಡನೆ ಬಂದಿಹ ನೃಪರ | ವೃತ್ತಾಂತಮಂ ಬಭ್ರುವಾಹನಂ ಕೇಳ್ದು ಭಟರಂ ಕಳುಹಿ ತೊಳತೊಳಗುವ || |
[ಆವರಣದಲ್ಲಿ ಅರ್ಥ];=
|
ಪದ್ಯ :-:೨೦:[ಸಂಪಾದಿಸಿ]
ಅರಸ ಕೇಳಾದುದನಿತರೊಳಸ್ತಮಯ ಸಮಯ | ಮರವಿಂದದಲರ್ಗಳೊಳ್ ಸೆರೆಯಾದುವಾರಡಿಗ | ಳಿರದೆ ಸರಿದವು ಬಿಸಿಲ ಬೀಡುಗಳ್ ಗೂಡುಗೊಂಡುವು ಕೂಡೆ ಪಕ್ಷಿಜಾತಿ || |
[ಆವರಣದಲ್ಲಿ ಅರ್ಥ];=
|
ಪದ್ಯ :-:೨೧:[ಸಂಪಾದಿಸಿ]
ವಿಳಸಿತಾಂಬರ ಮಣಿ ವಿಭೂಷಣವನುಳಿದು ಮಂ | ಗಳರಾಗಮಂ ತಾಳ್ದು ತಾರಾಭರಣವನಾಂ | ತಳೊ ಸಂಜೆವೆಣ್ಣೆಂಬ ತೆರದಿಂದೆ ಕೆಂಪಿಡಿದುಡುಗಳೆಸೆದುವಾಗಸದೊಳು || |
[ಆವರಣದಲ್ಲಿ ಅರ್ಥ];=
|
ಪದ್ಯ :-:೨೨:[ಸಂಪಾದಿಸಿ]
ಏನೆಂಬೆನರ್ಜುನನ ಕಟಕಮಿರ್ದುದು ಮಹಾಂ | ಭೋನಿಧಿಯ ಮಸಕದಿಂ ಪೊಳಲು ಪೊರವಳಯದು | ದ್ಯಾನವೀಧಿಗಳೊಳತ್ತಲ್ ಬಭ್ರವಾಹನಂ ನಗರದೊಳೆಣಿಕೆಗೊಳ್ಳದೆ || |
[ಆವರಣದಲ್ಲಿ ಅರ್ಥ];=
|
ಪದ್ಯ :-:೨೩:[ಸಂಪಾದಿಸಿ]
ಪಳುಕುಗಳ ನೆಲಗಟ್ಟು ಮರಕತಂಗಳ ಜಗಲಿ | ಪೊಳೆವ ನೀಲದ ಭಿತ್ತಿ ಬಜ್ಜರದ ಕಂಭಮುರೆ | ತೊಳಪ ವೈಡೂರಿಯದ ಮದನಕೈ ಮಿರಿಪ ಗೋಮೇಧಿಕದ ಬೋದಿಗೆಗಳು || |
[ಆವರಣದಲ್ಲಿ ಅರ್ಥ];=
|
ಪದ್ಯ :-:೨೪:[ಸಂಪಾದಿಸಿ]
ಸಜ್ಜುಕಂ ಮುಡಿವ ತಿಲಕಮನಿಡುವ ಮೊಗಮುರಿವ | ಕಜ್ಜಳಂಬರೆವ ಕನ್ನಡಿಯ ನಿಟ್ಟಿಪ ಪಾಡು | ವುಜ್ಜುಗದ ನರ್ತನದ ಕೋಪುಗಳ ವೀಣಾದಿವಾದ್ಯಮಂ ಬಿತ್ತಿರಿಸುವ || |
[ಆವರಣದಲ್ಲಿ ಅರ್ಥ];=
|
ಪದ್ಯ :-:೨೫:[ಸಂಪಾದಿಸಿ]
ಅಂಚೆಗಳ್ ಕೊಳರ್ವಕ್ಕಿಗಳ್ ಜೊನ್ನವಕ್ಕಿಗಳ್ ಪಿಂಚೆಗಳ್ ಗಿಳಿಗಳೆಣೆವಕ್ಕಿಗಳ್ ಪರಮೆಗಳ್ ಕೊಂಚೆಗಳ್ ಕೋಗಿಲೆಗಳಲ್ಲಿಗೊಪ್ಪಿದುವು ಸಜ್ಜೀವಭಾವದಿಂದೆ || |
[ಆವರಣದಲ್ಲಿ ಅರ್ಥ];=
|
ಪದ್ಯ :-:೨೬:[ಸಂಪಾದಿಸಿ]
ನೀಲಮಣಿಕಾಂತಿಗಳ ಕತ್ತಲೆಯ ಮುತ್ತುಗಳ | ಡಾಳಗಳ ಕೌಮುದಿಯ ಮಾಣಿಕದ ರಶ್ಮಿಗಳ ಬಾಲಾತಪದ ವಿದ್ರುಮಚ್ಚವಿಯ ಸಂಜೆಗೆಂಪಿನ ಪಗಲಿರುಳ್ಗಳಲ್ಲಿ || |
[ಆವರಣದಲ್ಲಿ ಅರ್ಥ];=
|
ಪದ್ಯ :-:೨೭:[ಸಂಪಾದಿಸಿ]
ಕಸ್ತುರಿ ಜವಾಜಿಗಳ ಸಾರಣಿಯ ಕುಂಕುಮ ಪ | ರಿಸ್ತರಣದಗುರು ಚಂದನ ಧೂಪ ವಾಸಿತದ | ವಿಸ್ತರದ ಕರ್ಪೂರತೈಲದಿಂದಲ್ಲಲ್ಲಿಗುರಿವ ಬೊಂಬಾಳಂಗಳ || |
[ಆವರಣದಲ್ಲಿ ಅರ್ಥ];=
|
ಪದ್ಯ :-:೨೮:[ಸಂಪಾದಿಸಿ]
ಓಲಗಕೆ ಬಂದ ನೃಪಕೋಟಿ ಕೋಟೀರ ಪ್ರ | ಭಾಲಹರಿ ಹರಿದು ಮುಸುಕಿತು ತತ್ಸಭಾಮಣಿ | ಜ್ವಾಲೆಗಳ ನಿಕರಮಂ ಕರಮಂ ಮುಗಿವ ಭಟರ ಸಂಘಸಂಘರ್ಷಣದೊಳು || |
[ಆವರಣದಲ್ಲಿ ಅರ್ಥ];=
|
ಪದ್ಯ :-:೨೯:[ಸಂಪಾದಿಸಿ]
ವಿಭ್ರಾಜಿಸುವ ರಾಜಮಂಡಲದಿರವನೆ ಕಂ | ಡಭ್ರದಲ್ಲಿಯ ರಾಜಮಂಡಲಂ ತನಗಿನ್ನು | ವಿಭ್ರಮದ ವ್ಯತ್ತಮೇಕೆಂದು ಲಜ್ಜಿಸಿ ನೀಳ್ದ ತೆರದಿಂದೆ ಕಂಗೊಳಿಸುವ || |
[ಆವರಣದಲ್ಲಿ ಅರ್ಥ];=
|
ಪದ್ಯ :-:೩೦:[ಸಂಪಾದಿಸಿ]
ಬಳಿಕಾ ಮಹಾಸ್ಥಾನದೊಳ್ ಬಭ್ರುವಾಹನಂ || ನಲವಿಮದೆ ಕುಳ್ಳಿರ್ದು ನಗುತೆ ಪರಮಂಡಲ | ಸ್ಥಳದಿಂದೆ ಬಂದ ರಾಯರ ಯಜ್ಞತುರಗಪುಂ ಕಟ್ಟಿಕೊಂಡೆವು ಮನೆಯೊಳು| |
[ಆವರಣದಲ್ಲಿ ಅರ್ಥ];=
|
ಪದ್ಯ :-:೩೧:[ಸಂಪಾದಿಸಿ]
ಇಂತಿಲ್ಲಿ ನಡೆದಖಿಲಪೃತ್ತಾಂತಮಂ ಕೇಳ್ದ | ಳಂತಃಪುರದೊಳರ್ಜುನನ ಗುಣಾವಳಿಗಳಂ | ಸಂತತಂ ನೆನೆದು ಚಿಂತಿಪ ಬಭ್ರುವಾಹನನ ನಿಜಮಾತೆ ಚಿತ್ರಾಂಗದೆ || |
[ಆವರಣದಲ್ಲಿ ಅರ್ಥ];=
|
ಪದ್ಯ :-:೩೨:[ಸಂಪಾದಿಸಿ]
ಕ್ಷುದ್ರಬುದ್ಧಿಯನೆಲ್ಲಿ ಕಲಿತೆ ನೀನೀಪರಿ ಗು | ರುದ್ರೋಹಕೆಂತು ತೊಡರ್ದುದು ನಿನ್ನ ಮನಮಕಟ | ಮದ್ರಮಣನಾಗಮಂ ನಿನಗೆ ವಿರಹಿತಮಾದುದಾತನುದರದೊಳೆ ಜನಿಸಿ || |
[ಆವರಣದಲ್ಲಿ ಅರ್ಥ];=
|
ಪದ್ಯ :-:೩೩:[ಸಂಪಾದಿಸಿ]
ಮಾತೆಯ ನುಡಿಗೆ ನಡುನಡುಗಿ ಬಭ್ರುವಾಹನಂ | ಭೀತಿಯಿಂದಡಿಗೆರಗಿ ಕ್ಷತ್ರಿಯರ ಪಂತದಿಂ | ದಾತನ ತುರಗಮಂ ಕಟ್ಟಿದೆಂ ನಿಮ್ಮ ಚಿತ್ತಕೆ ಬಾರದಿರ್ದ ಬಳಿಕ || |
[ಆವರಣದಲ್ಲಿ ಅರ್ಥ];=
|
ಪದ್ಯ :-:೩೪:[ಸಂಪಾದಿಸಿ]
ಮಗನೆ ಕೇಳೆನ್ನನೆಂದರ್ಜುನಂ ಬಿಟ್ಟು ನಿಜ | ನಗರಿಗೈದಿದಿನಂದು ಮೊದಲಾಗಿ ತಾನವನ | ನಗಲ್ದ ಸಂತಾಪದಿಂ ತಪಿಸುತಿರ್ದೆಂ ಪುಣ್ಯವಶದಿಮದೆ ಬಂದನಿಂದು || |
[ಆವರಣದಲ್ಲಿ ಅರ್ಥ];=
|
ಪದ್ಯ :-:೩೫:[ಸಂಪಾದಿಸಿ]
ಕಂದ ನೀನಿಂದು ನಿನ್ನಖಿಳ ಪ್ರಕೃತಿಗಳಂ | ತಂದೆಗೊಪ್ಪಿಸಿ ಯುಧಿಷ್ಠಿರನೃಪನ ವೈರಿಗಳ | ಮುಂದೆ ತೋರಿಸು ನಿನ್ನ ಶೌರ್ಯಮಂ ತನುಧನಪ್ರಾಣಂಗಳವರದಾಗೆ || |
[ಆವರಣದಲ್ಲಿ ಅರ್ಥ];=
|
ಪದ್ಯ :-:೩೬:[ಸಂಪಾದಿಸಿ]
ಜನನಿಯಂ ಮನೆಗೆ ಮನ್ನಿಸಿ ಕಳುಹಿ ಬಭ್ರುವಾ | ಹನನಾ ಸುಬುದ್ದಿಯಂ ನೋಡಿ ಪಿತನಂ ಕಾಣ್ಬು | ದನುಚಿತವೊ ಮೇಣುಚಿತಮಾದಪುದೊ ಪೇಳಿದರ ನಿಶ್ಚಯವನೀಗಳೆನಲು || |
[ಆವರಣದಲ್ಲಿ ಅರ್ಥ];=
|
ಪದ್ಯ :-:೩೭:[ಸಂಪಾದಿಸಿ]
ಇನ್ನು ಕಟ್ಟಿಸು ಗುಡಿಗಳಂ ಬೇಗ ಪಟ್ಟಣಕೆ | ನಿನ್ನಖಿಳ ರಾಜ್ಯಪದವಿಯನೊಪ್ಪಿಸಯ್ಯಂಗೆ | ಮನ್ನೆಯರ್ ಚತುರಂಗದ ಸೇನೆ ನಾಗರಿಕಜನಮಲಂಕರಿಸಿಕೊಳಲಿ || |
[ಆವರಣದಲ್ಲಿ ಅರ್ಥ];=
|
ಪದ್ಯ :-:೩೮:[ಸಂಪಾದಿಸಿ]
ವರಸುಬುದ್ದಿಯ ಬುದ್ದಿಯಂ ಕೇಳ್ದನಾ ಪಾರ್ಥಿ | ದೊರೆದೊರೆಗಳೆಲ್ಲರಂ ಕಳುಪಿದಂ ಮನೆಗಳ್ಗೆ | ಪುರದೊಳಗೆ ಡಂಗುರಂಬೊಯ್ಸಿದಂ ಕೋಶದ ಸುವಸ್ತುಗಳನು || |
[ಆವರಣದಲ್ಲಿ ಅರ್ಥ];=
|
ಪದ್ಯ :-:೩೯:[ಸಂಪಾದಿಸಿ]
ನವ್ಯಚಿತ್ತಾಂಬರಾಭರಣಂಗಳಂ ವಿವಿಧ | ದಿವ್ಯರತ್ನಂಗಳಂ ಪರಿಪರಿಯ ಪರಿಮಳ | ದ್ರವ್ಯಂಗಳಂ ಕನಕ ಖಟ್ವ ನುತಹಂಸತೂಲದಮೃದುಲ ತಲ್ಪಗಳನು || |
[ಆವರಣದಲ್ಲಿ ಅರ್ಥ];=
|
ಪದ್ಯ :-:೪೦:[ಸಂಪಾದಿಸಿ]
ಸ್ವರಗೈದುದನಿತರೊಳ್ ಚರಣಾಯುಧಂ ಜಾರೆ | ಯರ ಮನಂ ಬೆಚ್ಚಿದುದು ಮೂಡದೆಸೆ ಬೆಳತುದು ಪ | ಸರಿದುದು ತಂಗಾಳಿ ಖಗನಿಕರಮುಲಿದೆದ್ದುವರಳಿದುವು ತಾವರೆಗಳು || |
[ಆವರಣದಲ್ಲಿ ಅರ್ಥ];=
|
ಪದ್ಯ :-:೪೧:[ಸಂಪಾದಿಸಿ]
ಅರಳ್ದ ಶೋಣಾಂಬುಜಚ್ಛಾಯೆಗಳಡರ್ದುವೆನೆ | ಭರದಿಂದೆ ಕತ್ತಲೆಯ ಮೇಲೆ ಬಹ ರವಿಯ ರಥ | ತುರಗ ಖುರಪುಟದಿಂದಮೇಳ್ವ ಕೆಂದೂಳ್ಗಳೆನೆ ಪ್ರಾಚೀ ನಿತಂಬವತಿಗೆ || |
[ಆವರಣದಲ್ಲಿ ಅರ್ಥ];=
|
ಪದ್ಯ :-:೪೧:[ಸಂಪಾದಿಸಿ]
ಜಿತತಮಂ ಭುವನಮಧ್ಯಪ್ರಕಾಶಂ ವಿರಾ | ಜಿತ ವರಾಹ ಶ್ರೀಧರಂ ಪಂಚಮುಖಮೂರ್ತಿ | ನುತಕಾಶ್ಯಪಂ ರಾಜತೇಜೋಹರಂ ದೂಷಣಾರಿ ಗೋಕುಲಜಾತನು || |
[ಆವರಣದಲ್ಲಿ ಅರ್ಥ];=
|
ಪದ್ಯ :-:೪೩:[ಸಂಪಾದಿಸಿ]
ಒಂದು ಮಾರ್ಗದೊಳೆ ನಡೆಯದೆ ಸದಾ ದ್ವಿಜನಿಕರ | ದಂದಮಂ ಕಿಡಿಸಿ ಗುರುಬುಧ ಮಂಗಳೋನ್ನತಿಗೆ | ಕುಂದನಿತ್ತುದರಿಂದ ಸಾರಧಿ ಹೆಳವನಾದನಾತ್ಮಜಂ ಲೋಕವರಿಯೆ || |
[ಆವರಣದಲ್ಲಿ ಅರ್ಥ];=
|
ಪದ್ಯ :-:೪೪:[ಸಂಪಾದಿಸಿ]
ಆದಿತ್ಯನುದಯದೊಳ್ ಫಲುಗುಣನ ಸೂನು ಸಂ | ಧ್ಯಾದಿಗಳನಾಚರಿಸಿ ವಸ್ತುಗಳನೈದೆ ಸಂ | ಪಾದಿಸಿ ಕಿರೀಟಿಯಂ ಕಾಣಲನುವಾದನರ್ಜನನಿತ್ತಪಾಳೆಯದೊಳು || |
[ಆವರಣದಲ್ಲಿ ಅರ್ಥ];=
|
ಪದ್ಯ :-:೪೫:[ಸಂಪಾದಿಸಿ]
ಅನುಸಾಲ್ವಕನ ಸೇನೆ ಯಾದವರ ಚತುರಂಗ | ಮಿನಸುತನ ಸೂನುವಿನ ಮೋಹರಂ ಯೌವನಾ | ಶ್ವನ ಪಾಯದಳ ಮತುಲಹಂಸಕೇತುವಿನ ಪಡೆ ನೀಲಧ್ವಜನ ವಾಪಿನಿ || |
[ಆವರಣದಲ್ಲಿ ಅರ್ಥ];=
|
ಪದ್ಯ :-:೪೬:[ಸಂಪಾದಿಸಿ]
ಆ ಸಮಯದೊಳ್ ಬಭ್ರುವಾಹನಂ ಪೊರಮಟ್ಟ | ನಾ ಸುಬುದ್ಧಿ ಪ್ರಮುಖ ಮಂತ್ರಿಗಳ ಗಡಣದಿಂ | ದಾಸಕಲ ವಸ್ತುಸಹಿತಾ ಕುದುರೆಯಂ ಕೊಂಡು ನಿಖಿಳ ಚತುರಂಗದೊಡನೆ || |
[ಆವರಣದಲ್ಲಿ ಅರ್ಥ];=
|
ಪದ್ಯ :-:೪೭:[ಸಂಪಾದಿಸಿ]
ಎಲ್ಲಿ ಕೌಂತೇಯನಿರ್ದಪನಲ್ಲಿಗಾಗಿ ನಿಂ | ದಲ್ಲಿನಿಲ್ಲದೆ ಸಂಭ್ರಮದೊಳೆ ನಡೆತಂದು ಮೈ | ಭುಲ್ಲವಿಸೆ ಹರ್ಷದಿಂ ಪಾರ್ಥನಂಕಂಡು ನಿಜಮೌಳಿಯಂ ತೆಗೆದು ನರನ || |
[ಆವರಣದಲ್ಲಿ ಅರ್ಥ];=
|
ಪದ್ಯ :-:೪೮:[ಸಂಪಾದಿಸಿ]
ಅರಸ ಕೇಳಾ ಬಭ್ರುವಾಹನನೊಡನೆ ಬಂದ | ಪರಿವಾರಮಾ ಪುರಜನಂಗಳಾ ಕಾಮಿನಿಯ | ರರಳ ಮಳೆ ಮುಕ್ತಾಫಲಂಗಳಾ ಸುರಿದರರ್ಜುನನ ಮಸ್ತಕದಮೇಲೆ || |
[ಆವರಣದಲ್ಲಿ ಅರ್ಥ];=
|
ಪದ್ಯ :-:೪೯:[ಸಂಪಾದಿಸಿ]
ತಾತ ಚಿತ್ತೈಸು ನಿನ್ನಾತ್ಮಜಂ ತಾನೆನ್ನ | ಮಾತೆ ಚಿತ್ರಾಂಗದೆ ಸಲಹಿದವಳುಲೂಪಿ ಸಂ | ಪ್ರೀತಿಯಿಂದಿವರಾದರರಸಿಯರ್ ನೀನಂದು ತೀರ್ಥಯಾತ್ರೆಗೆ ಬಂದಿರೆ || |
[ಆವರಣದಲ್ಲಿ ಅರ್ಥ];=
|
ಪದ್ಯ :-:೫೦:[ಸಂಪಾದಿಸಿ]
ಮಗುಳೆ ಮಗುಳಡಿಗೆರಗಿ ಭಯ ಭರಿತಭಕ್ತಿಯಿಂ | ಮಿಗೆ ಬೇಡಿಕೊಳುತೆ ಕಾಲ್ವಿಡಿದಿರ್ಪ ತನಯನಂ | ಮೊಗನೋಡಿ ಮಾತಾಡಿಸದೆ ಬೆರಗುವಡೆದಂತೆ ಕೆತ್ತುಗೊಂಡಿಹ ವಿಜಯನ || |
[ಆವರಣದಲ್ಲಿ ಅರ್ಥ];=
|
ಪದ್ಯ :-:೫೧:[ಸಂಪಾದಿಸಿ]
ಪ್ರದ್ಯುಮ್ನ ಹಂಸಧ್ವಜಾದಿಗಳ್ ಬಳಿಕಿದೇ | ನುದ್ಯೋಗಮೆಲೆ ಪಾರ್ಥ ನಿನ್ನ ತನುಭವನೀತ | ನುದ್ಯತ್ಪರಾಕ್ರಮಿ ಮಹಾವೈಭವಶ್ಲಾಘ್ಯನಭಿಮಾನಿ ಮಾನ್ಯನಿಳೆಗೆ || |
[ಆವರಣದಲ್ಲಿ ಅರ್ಥ];=
|
ಪದ್ಯ :-:೫೧:[ಸಂಪಾದಿಸಿ]
ಭೂಪ ಕೇಳಿವರಿಂತೆನಲ್ಕೆ ಬಳಿಕರ್ಜುನಂ | ಕೋಪದಿಂದವನ ನಿಟ್ಟಿಸುತೆಂದನಾಗ ತಲೆ || ಪೋಪುದಕೆ ತನ್ನ ಕಾಲ್ಪೊಣೆಯೆಂಬ ಧರೆಯ ನಾಣ್ಣುಡಿ ತಪ್ಪದಾದುದೆನಲು || |
[ಆವರಣದಲ್ಲಿ ಅರ್ಥ];=
|
ಪದ್ಯ :-:೫೩:[ಸಂಪಾದಿಸಿ]
ಚಿತ್ರಾಂಗದೆಗೆ ವೈಶ್ಯನಿಂದೆ ಸಂಭವಿಸಿರ್ದ | ಪುತ್ರನಲ್ಲದೆ ತನಗೆ ಜನಿಸಿದೊಡೆ ಬಿಡುವೆಯಾ | ಕ್ಷತ್ರಿಯರ ಮತಮಂ ಸುಭದ್ರೆಗೆನ್ನಿಂ ಜನಿಸಿದಭಿಮನ್ಯು ತಾನೋರ್ವನೆ || |
[ಆವರಣದಲ್ಲಿ ಅರ್ಥ];=
|
ಪದ್ಯ :-:೫೪:[ಸಂಪಾದಿಸಿ]
ಜಂಬುಕಂ ಜನಿಸುವುದೆ ಸಿಂಗದುದರದೊಳಕಟ | ಹೆಂಬೇಡಿ ನೀನೆಲವೊ ಕುಲಗೇಡಿ ತನ್ನ ಬಸಿ | ರಿಂ ಬಂದವನೆ ಖೂಳ ಕುದುರೆಯಂ ಕಾದದೇತಕೆ ತಂದೆ ಪಂದೆ ನಿನಗೆ || |
[ಆವರಣದಲ್ಲಿ ಅರ್ಥ];=
|
ಪದ್ಯ :-:೫೫:[ಸಂಪಾದಿಸಿ]
ಅಹಹ | ನರ್ತಕಿಯಲಾ ಗಂಧರ್ವನಾಯಕನ | ದುಹಿತೃವಲ್ಲಾ ನಿನ್ನ ಮಾತೆ ಚಿತ್ರಾಂಗದೆಯೆ | ವಿಹಿತಮಲ್ಲಿದು ನಿನಗೆ ಭೂಮಿಪರ ವೇಷಮಂ ತಳೆದ ನಾಟಕದ ರಚನೆ || |
[ಆವರಣದಲ್ಲಿ ಅರ್ಥ];=
|
ಪದ್ಯ :-:೫೬:[ಸಂಪಾದಿಸಿ]
ಬಿರುನುಡಿಗಳಿಂ ತನ್ನ ಮೊಗನೋಡದರ್ಜುನಂ | ಜರೆದೊಡಾತನ ಬಗೆಯನಾ ಸುಬುದ್ಧಿಗೆ ತೋರು | ತುರೆ ಕನಲ್ದಿರದೆದ್ದು ಪಳಿದೆಲಾ ಮಾತೆಯಂ ನನಗೆ ಸೀವರಿಸಿದೆಯಲಾ || |
[ಆವರಣದಲ್ಲಿ ಅರ್ಥ];=
|
ಪದ್ಯ :-:೫೭:[ಸಂಪಾದಿಸಿ]
ತೆಗಸಿದಂ ತಂದಖಳವಸ್ತುವಂ ಕುದುರೆಯಂ | ಬಿಗಿಸಿದಂ ಲಾಯದೊಳ್ ಪುರಜನಸ್ತ್ರೀಯರಂ | ಪುಗಿಸಿದಂ ಪಟ್ಟಣಕೆ ಕರೆಸಿದಂ ಸಚಿವರಂ ಸೇನಾದಿನಾಯಕರನು | |
[ಆವರಣದಲ್ಲಿ ಅರ್ಥ];=
|
ಪದ್ಯ :-:೫೮:[ಸಂಪಾದಿಸಿ]
ಕೇಳೆಲೆ ನೃಪಾಲಕುಲತಿಲಕ ಮುಂದದ್ಭುತ ಕ | ಥಾಳಾಪಮಂ ಬಳಿಕ ಪೂಡಿದುದು ಕರ್ಕಶದ | ಕಾಳಗಂ ಸವ್ಯಸಾಚಿಗೆ ಬಭ್ರುವಾಹನನ ಕೂಡೆ ಮಹದಾಹವದೊಳು || |
[ಆವರಣದಲ್ಲಿ ಅರ್ಥ];=
|
ಪದ್ಯ :-:೫೯:[ಸಂಪಾದಿಸಿ]
ಆಲಿಸಿದನಲ್ಲಿ ಪರಿಯಂತ ಜನಮೇಜಯಂ | ಮೇಲಣ ಕಥೆಯನೊಲ್ದು ಬೆಸೆಗೊಂಡನೆಲೆ ಮುನಿಪ | ಹೋಲಿಸಿ ನುಡಿದೆ ಸುರಪಫಲುಗುಣರ ಸಮರಮಂ ಕೇಳ್ದೆನದನಾಂ ನಿನ್ನೊಳು || |
[ಆವರಣದಲ್ಲಿ ಅರ್ಥ];=
|
ಪದ್ಯ :-:೬೦:[ಸಂಪಾದಿಸಿ]
ಪ್ರೇಮದಿಂದೈದೆ ವಿಸ್ತರಿಸಿದಂ ನೃಪಕುಲೋ | ದ್ದಾಮ ಜನಮೇಜಯಂ ಬೆಸಗೊಳಲ್ ಜೈಮಿನಿ ಮ | ಹಾಮುನೀಂದ್ರಂ ಕೂರ್ತು ಕೇಳ್ವರ್ಗೆ ರೋಮಾಂಚನಂ ಪೊಣ್ಮತಿ ಹರುಷ ಮುಣ್ಮ|| |
[ಆವರಣದಲ್ಲಿ ಅರ್ಥ];=
|
ಹೋಗಿ[ಸಂಪಾದಿಸಿ]
ನೋಡಿ[ಸಂಪಾದಿಸಿ]
ಜೈಮಿನಿ ಭಾರತ-ಸಂಧಿಗಳು:*1 * 2 *3 * 4 * 5 *6 * 7 * 8 *9 * 10 * 11* 12* 13 * 14 * 15 * 16 *17* 18 * 19* 20 * 21 * 22* 23* 24 * 25* 26* 27* 28* 29* 30* 31* 32* 33* 34 |
ಪರಿವಿಡಿ[ಸಂಪಾದಿಸಿ]
ಕನ್ನಡ ವಿಕಿಸೋರ್ಸ್[ಸಂಪಾದಿಸಿ]
ಹಳಗನ್ನಡ ಸಾಹಿತ್ಯ| ಪಂಪಭಾರತ |ಜೈಮಿನಿ ಭಾರತ |ಕುಮಾರವ್ಯಾಸ ಭಾರತ | ನಾಡಗೀತೆಗಳು | ಜನಪದ ಸಾಹಿತ್ಯ | ಚಲನಚಿತ್ರ ಸಾಹಿತ್ಯ | ಚಲನಚಿತ್ರೇತರ ಸಾಹಿತ್ಯ |ಭಾವಗೀತೆಗಳು | ಭಕ್ತಿಗೀತೆಗಳು | ದಾಸ ಸಾಹಿತ್ಯ | ವಚನ ಸಾಹಿತ್ಯ | ತಾತ್ವಿಕ ಸಾಹಿತ್ಯ | ಭಗವದ್ಗೀತೆ |
ಮಂಕುತಿಮ್ಮನ ಕಗ್ಗ | ಶಿಶು ಸಾಹಿತ್ಯ | ಕವನ ಸಂಕಲನಗಳು | ಸಂಪ್ರದಾಯ ಗೀತೆಗಳು |ಮಂಕುತಿಮ್ಮನ ಕಗ್ಗ| |ಸರ್ವಜ್ಞ |
ಜೀವನ ಚರಿತ್ರೆ|ಸ್ತೋತ್ರಗಳು|ಸಂಸ್ಕೃತ ಸಾಹಿತ್ಯ
ಉಲ್ಲೇಖ[ಸಂಪಾದಿಸಿ]
- ↑ ಉ(.ದಕ್ಷಿಣಾಮೂರ್ತಿ ಶಾಸ್ತ್ರಿ ಮಕ್ಕಳು ಡಿ.ಸುಬ್ಬಾಶಾತ್ರಿಗಳ ಮಕ್ಕಳಾದ ರಂಗಶೇಷಶಾಸ್ತ್ರಿ ; ದಕ್ಷಿಣಾಮೂರ್ತಿ ಶಾಸ್ತ್ರಿ ; ಇವರಿಂದ ರಚಿತವಾದ ನಡುಗನ್ನಡದಲ್ಲಿರುವ ಸುಮಾರು ೧೯೨೦ರಲ್ಲಿ ಅಚ್ಚಾದ ಜೈಮಿನಿಭಾರತ- ಸಟೀಕಾ ಇದರ ಆಧಾರ. -ಕಳಪೆ ಕಾಗದದ ಪುಸ್ತಕ ಜೀರ್ಣವಾಗಿದ್ದು ಮುದ್ರಣ ವಿವರ ಅಸ್ಪಷ್ಟ)
- ↑ ಜೈಮಿನಿ ಭಾರತ -ಟಿ ಕೃಷ್ನಯ್ಯ ಶೆಟ್ಟಿ & ಸಂನ್ಸ ಬಳೆಪೇಟೆ ಬೆಂಗಳೂರು.