ಜೈಮಿನಿ ಭಾರತ ಹದಿಮೂರನೆಯ ಸಂಧಿ
ಹದಿಮೂರನೆಯ ಸಂಧಿ[ಸಂಪಾದಿಸಿ]
ಪದ್ಯ :-:ಸೂಚನೆ:[ಸಂಪಾದಿಸಿ]
ಹಂಸಧ್ವಜನ ಸುತನ ಸಮರಮರಿದಾಗಿ ಬರೆ ಕಂಸಾರಿ ಬಂದು ಸಾರಥಿಯಾಗಿ ನರನ ಶರ | ದಿಂ ಸುಧನ್ವನ ಶಿರವನರಿಸಿದಂ ಮೇಲೆ ಸುರಗಣ ಮೈದೆ ಕೊಂಡಾಡಲು || |
[ಆವರಣದಲ್ಲಿ ಅರ್ಥ];=
|
ಪದ್ಯ :-:೧:[ಸಂಪಾದಿಸಿ]
ಕೇಳಲೆ ನೃಪಾಲಕುಲಮೌಳಿ ಬಳಿಕರ್ಜುನಂ | ಕಾಳಗಕೆ ನಡೆವ ಭಟರಂ ನಿಲಿಸಿ ಮುಂದುವರಿ | ವಾಳಪಡೆಯಂ ತೆಗೆಸಿ ಭರದಿಂದೆ ನೂಕಿದಂ ಕಲಿಸುಧನ್ವನ ಸರಿಸಕೆ || |
[ಆವರಣದಲ್ಲಿ ಅರ್ಥ];=
|
ಪದ್ಯ :-:೨:[ಸಂಪಾದಿಸಿ]
ಕುದರೆಗಳ ಖುರಪುಟಧ್ವನಿ ನಿಜವರೂಥ ಚ | ಕ್ರದ ರವಂ ದೇವದತ್ತದ ಘೋಷಮೆಸೆವ ಸಿಂ | ಧದ ತುದಿಯ ಕಪಿಯಬ್ಬರಣೆ ಧನುಜ್ರ್ಯಾನಾದಮೊಂದಾಗಿ ಭೀಕರದೊಳು || |
[ಆವರಣದಲ್ಲಿ ಅರ್ಥ];=
|
ಪದ್ಯ :-:೩:[ಸಂಪಾದಿಸಿ]
ವಾನರಸಮುನ್ನತ ಧ್ವಜರೂಥದೊಳೈದು | ವಾ ನರ ಸಮರ ಭರವನರಿದು ಕಾಳಗಕೆ ತಾ | ವಾನರಸಮರ್ಥರೆಂದರ್ಜುನಂ ಬಹನೆಂದು ನಿಜಸಾರಥಿಗೆ ಸೂಚಿಸಿ || |
[ಆವರಣದಲ್ಲಿ ಅರ್ಥ];=
|
ಪದ್ಯ :-:೪:[ಸಂಪಾದಿಸಿ]
ಕ್ರುದ್ಧನಾದಂ ಧನಂಜಯನಿದೇಕೆಮ್ಮೊಡನೆ | ಯುದ್ದವನಪೇಕ್ಷಿಸುವೆ ಶಿವಶಿವಾ ನೀನಪ್ರ | ಬುದ್ಧನಲ್ಲವೆ ದೇವದೈತ್ಯ ಮಾನವರೊಳ್ ಮದೀಯವೈರದೊಳೆ ಬಾಳ್ಧ || |
[ಆವರಣದಲ್ಲಿ ಅರ್ಥ];=
|
ಪದ್ಯ :-:೫:[ಸಂಪಾದಿಸಿ]
ಸಾರಥಿಯ ಬಲ್ಪಿಂದೆ ಕೌರವಬಲದ ನಿಖಿಳ | ವೀರರಂ ಗೆಲ್ದೆಯಲ್ಲದೆ ನಿನ್ನ ನೀ ಧರೆಯೊ | ಳಾರರಿಯರಕಟ ನೀಂ ಕೃಷ್ಣನಂ ಕರೆಸಿಕೊಂಡಳವಿಗುಡು ಬಳಿಕೆನ್ನೊಳು || |
[ಆವರಣದಲ್ಲಿ ಅರ್ಥ];=
|
ಪದ್ಯ :-:೬:[ಸಂಪಾದಿಸಿ]
ಪೂತುರೆ ಸುಧನ್ವ ಸತ್ವಾತಿಶಯದಿಂದೆ ವಿ | ಖ್ಯಾತನಹೆ ಮದ್ರಥವನೀ ತೆರದೊಳಿಸುವರಂ | ಪಾತಾಳ ಸುರನಿಲಯಭೂತಳದ ಪಟುಭಟವ್ರಾತದೊಳ್ ಕಾಣೆನಿನ್ನು || |
[ಆವರಣದಲ್ಲಿ ಅರ್ಥ];=
|
ಪದ್ಯ :-:೭:[ಸಂಪಾದಿಸಿ]
ಇನ್ನು ಹಯಮಂ ಬಿಡುವನಲ್ಲ ನಿನಗೆಮ್ಮ ತಾ | ತಂ ನಳಿನನಾಭನ ಸಹಾಯಮಿಲ್ಲದೆ ಬರಿದೆ | ತನ್ನನಳುಕಿಸಲರಿಯೆ ಕಕ್ಕುಲಿತೆ ಬೇಡ ನಡೆ ಹಸ್ತಿನಾಪುರಕೆ ಮರಳಿ || |
[ಆವರಣದಲ್ಲಿ ಅರ್ಥ];=
|
ಪದ್ಯ :-:೮:[ಸಂಪಾದಿಸಿ]
ಈ ಚಾಪಮೀ ಬಾಣಮೀ ದಿವ್ಯರಥಮೀ ವ | ನೇಚರಧ್ವಜಮೀ ಮಹಾಶ್ವಂಗಳೀ ಸವ್ಯ | ಸಾಚಿತ್ವಮೀ ದೇವದತ್ತಶಂಖಂ ತನಗಿದೇಕೆ ನಿನ್ನಂ ಜಯಿಸದೆ || |
[ಆವರಣದಲ್ಲಿ ಅರ್ಥ];=
|
ಪದ್ಯ :-:೯:[ಸಂಪಾದಿಸಿ]
ದಿವ್ಯಹಯ ರಥ ಚಾಪ ಶರ ಕೇತು ಕಂಬುಗಳ್ | ಸವ್ಯಸಾಚಿತ್ವಮಿವು ನಿನಗೊದಗಿದವು ರಣದೊ | ಳವ್ಯಯಂ ಸಾರಥ್ಯಮಂ ಮಾಡಲ್ಲಿನ್ನು ಜಯವಹುದೆ ಹುಲುಸೂತನಿಂದೆ || |
[ಆವರಣದಲ್ಲಿ ಅರ್ಥ];=
|
ಪದ್ಯ :-:೧೦:[ಸಂಪಾದಿಸಿ]
ಪಾಂಡವಂ ಬಳಿಕ ಬೇಸಗೆಯ ನಡುವಗಲ ಮಾ | ರ್ತಾಂಡನಂತಿಹ ಕಲಿಸುಧನ್ವನಂ ಕಂಡು ಮಿಗೆ | ಖಾಂಡವದಹನಲಬ್ಧವಾಗಿ ಮೂಡಿಗೆಯೊಳಿರ್ದಾಗ್ನೇಯಮಾರ್ಗಣವನು || |
[ಆವರಣದಲ್ಲಿ ಅರ್ಥ];=
|
ಪದ್ಯ :-:೧೧:[ಸಂಪಾದಿಸಿ]
ಆವಗಂ ಪೀರ್ವೊಡಾಸರ್ಗೊಂಡು ತೀರದ ಮ | ಹಾವಾರ್ಧಿಜಲವನೊಂದೇಸಾರಿ ಸುರಿಗೊಂಬ | ಡಾವರದೊಳೆದ್ದ ವಡಬಾಗ್ನಿಯೋ ವಿಲಯರುದ್ರನ ಪಣೆಯ ಕಣ್ಗಿಚ್ಚಿದೋ || |
[ಆವರಣದಲ್ಲಿ ಅರ್ಥ];=
|
ಪದ್ಯ :-:೧೨:[ಸಂಪಾದಿಸಿ]
ತೆಕ್ಕೆವರಿದೇಳ್ವ ಕರ್ಬ್ಬೊಗೆಯ ಹೊರಳಿಗಳ ದಶ | ದಿಕ್ಕುಗಳನವ್ವಳಿಪ ಕೇಸುರಿಯ ಚೂಣಿಗಳ | ಮಿಕ್ಕು ಸೂಸುವ ತೂರುಗಿಡಿಗಳ ಕಣಾಳಿಗಳ ಕಾರಿಡುವ ಪೊತ್ತುಗೆಗಳ || |
[ಆವರಣದಲ್ಲಿ ಅರ್ಥ];=
|
ಪದ್ಯ :-:೧೩:[ಸಂಪಾದಿಸಿ]
ಕಾದವು ಭಟರ ಕೈದುಗಳ್ ಪಿಡಿಯಲರಿದೆನ | ಲ್ಕಾದವು ಶರಾಗ್ನಿ ಗಾಹುತಿ ಗಜಹಯಾದಿಗಳ್ | ಕಾದವು ಧನಂಜಯನ ಮುಂದೆಮ್ಮ ಬಲಗಳೆಂದಾ ಸುಧನ್ವಂ ಕೆರಳ್ದು || |
[ಆವರಣದಲ್ಲಿ ಅರ್ಥ];=
|
ಪದ್ಯ :-:೧೪:[ಸಂಪಾದಿಸಿ]
ನಾದವು ಸಮಸ್ತಬಲಮಖಿಳವಾದಯಗಳ ನಿ ನಾದವುಡುಗಿತು ನನೆದು ಗಜ ವಾಜಿ ನಿಕರಮೇ | ನಾದವುದಕದೊಳೆಂಬುದಂ ಕಾಣೆನಾ ಸುಧನ್ವನ ವಾರುಣಾಸ್ತ್ರದಿಂದೆ || |
[ಆವರಣದಲ್ಲಿ ಅರ್ಥ];=
|
ಪದ್ಯ :-:೧೫:[ಸಂಪಾದಿಸಿ]
ಬಳಿಕೆ ವಾಯವ್ಯಾಸ್ತ್ರದಿಂದ ಶೋಷಿಸಿದನಾ | ಜಲವನರ್ಜುನ ನದ್ರಿಬಾಣಮಂ ಪೂಡಿದಂ | ಕಲಿಸುಧನ್ವಂ ತೊಟ್ಟನೈಂದ್ರಶರಮಂ ಫಲುಗುಣಂ ತಿಮಿರಸಾಯಕವನು || |
[ಆವರಣದಲ್ಲಿ ಅರ್ಥ];=
|
ಪದ್ಯ :-:೧೬:[ಸಂಪಾದಿಸಿ]
ಈ ತೆರದೊಳಖಿಳ ದಿವ್ಯಾಸ್ತ್ರಂಗಳಿಸುಗೆಗಳ ಚಾತುರ್ಯದಿಂದೊರ್ವರೊರ್ವರಂ ಗೆಲ್ವ ಸ | ತ್ವಾತಿ ಯದಿಂದೆ ಕಾದಿದರಾ ಸುಧನ್ವಾರ್ಜುನರ್ ಬಳಿಕ ರೋಷದಿಂದೆ || |
[ಆವರಣದಲ್ಲಿ ಅರ್ಥ];=
|
ಪದ್ಯ :-:೧೭:[ಸಂಪಾದಿಸಿ]
ಆ ವರ ಬ್ರಹ್ಮಾಸ್ತ್ರಂ ಗಳೆರಡುಂ ಪೊಣರ್ದಡಗ ಲಾ ವಿಜಯನೆಣಿಕೆಗೊಂಡೀತನಂ ಗೆಲ್ವ ನಗೆ | ಯಾವುದೆಂದುಗಿದು ಹೂಡಿದನಕ್ಷಯಾಸ್ತ್ರಮಂ ತನ್ನ ರಥಕವನ ತೇರ್ಗೆ || |
[ಆವರಣದಲ್ಲಿ ಅರ್ಥ];=
|
ಪದ್ಯ :-:೧೮:[ಸಂಪಾದಿಸಿ]
ಇಚ್ಚಾರಿಗೊಂಡು ನರನೆಚ್ಚ ಕೆಂಗರಿಗೋಲ ಬಚ್ಚಳೆಯ ಪೊಸಮಸೆಯ ನಿಚ್ಚಳದ ನಿಡುಸರಳ್ | ಪೆಚ್ಚಿದವು ನಿಮಿಷದೊಳ್ ಮುಚ್ಚಿದವು ಗಗನಮಂ ಕೊಚ್ಚಿದವು ಪರಬಲವನೆ || |
[ಆವರಣದಲ್ಲಿ ಅರ್ಥ];=
|
ಪದ್ಯ :-:೧೯:[ಸಂಪಾದಿಸಿ]
ಗೌರಿಯರಸನ ಕೂಡೆ ಕಾದಿದ ಪರಾಕ್ರಮದ | ಸೌರಂಭಮಿಂತುಟೆ ನಿವಾತಕವಚರನಿರಿದ | ಗೌರವಮಿದೀಗಲೇ ಭೀಷ್ಮ ಕರ್ಣ ದ್ರೋಣ ಮಾದ್ರಪತಿ ಮೊದಲಾಗಿಹ || |
[ಆವರಣದಲ್ಲಿ ಅರ್ಥ];=
|
ಪದ್ಯ :-:೨೦:[ಸಂಪಾದಿಸಿ]
ಕೇಳವನಿಪಾಲಕ ಸುಧನ್ವನಿಸುವಿಸುಗೆಯಂ ಪೇಳಲರಿಯೆಂ ತಿರುಗುತಿರ್ದುದು ವರೂಥಂ ಕು | ಲಾಲಚಕದ ವೊಲಸವಳಿದಂ ಕಪೀಶ್ವರಂ ಭ್ರಮಣೆಯಿಂ ಥ್ವಜದಮೇಲೆ || |
[ಆವರಣದಲ್ಲಿ ಅರ್ಥ];=
|
ಪದ್ಯ :-:೨೧:[ಸಂಪಾದಿಸಿ]
ವ್ಯಥಿಸಿದಂ ಗಾಯದಿಂ ಸೂತನಳಿಯಲ್ಕೆ ಸಾ ರಥಿತನವನುಂ ತಾನೆ ಮಾಡುತಿದಿರಾದನತಿ | ರಥತ ನೂಳಗ್ಗಳೆಯನರ್ಜುನನಾ ಸುಧನ್ವಂಗೆ ಬಳಿಕೀತನಂ ಧುರದೊಳು || |
[ಆವರಣದಲ್ಲಿ ಅರ್ಥ];=
|
ಪದ್ಯ :-:೨೨:[ಸಂಪಾದಿಸಿ]
ಅರಸ ಕೇಳರ್ಜುನಂ ಧ್ಯಾನಿಸಲ್ಕಾಗಳಿಭ ಪುರದೊಳರಿದಂ ಮುರಧ್ವಂಸಿ ಹಂಸಧ್ವಜನ | ಧುರಮಂ ಸುಧನ್ವನ ಪರಾಕ್ರಮವನೆಚ್ಚರಿಸಿ ಧರ್ಮತನಯಾದಿಗಳ್ಗೆ || |
[ಆವರಣದಲ್ಲಿ ಅರ್ಥ];=
|
ಪದ್ಯ :-:೨೨:[ಸಂಪಾದಿಸಿ]
ಕಶ್ಯಪ ವಸಿಷ್ಠಾದಿ ಪರಮಋಷಿಮುಖ್ಯರಾಲಸ್ಯಮಿಲ್ಲದೆ ಮಾಡುವ ಧ್ಯಾನಕೊಮ್ಮೆಯುಂ | ದೃಶ್ಯಮಿಲ್ಲದ ಚಿನ್ಮಯಾನಂದರೂಪನೀಕುಂತೀಕುಮಾರಕರ್ಗೆ || |
[ಆವರಣದಲ್ಲಿ ಅರ್ಥ];=
|
ಪದ್ಯ :-:೨೪:[ಸಂಪಾದಿಸಿ]
ಮೊಳಗಿದವು ನಿಸ್ಸಾಳಕೋಟಿಗಳ್ ಫಲುಗುಣನ ದಳಗೊಳಗೆ ತನತನಗೆರಗುತಿರ್ದುದುತ್ಸವದ | ಲಳಿ ಮಸಗಿ ಕಳಕಳದ ಬೊಬ್ಬೆಯಿಂ ಮಿಕ್ಕುದು ರಭಸಮಭ್ಧಘೋಷಣವನು || |
[ಆವರಣದಲ್ಲಿ ಅರ್ಥ];=
|
ಪದ್ಯ :-:೨೫:[ಸಂಪಾದಿಸಿ]
ಇನಿತೆಲ್ಲಮಂ ನೋಡುತಿರ್ದಂ ಸುಧನ್ವನನುದಿನಮಂತರಂಗದೊಳ್ ಧ್ಯಾನಿಸುವ ನಿರ್ಮಲಾ | ತ್ಮನದಿವ್ಯಮೂರ್ತಿಯಂ ಪಾರ್ಥನ ರಥಾಗ್ರದೊಳ್ ಕಂಡು ಪುಳಕೋದ್ಗಮದೊಳು || |
[ಆವರಣದಲ್ಲಿ ಅರ್ಥ];=
|
ಪದ್ಯ :-:೨೬:[ಸಂಪಾದಿಸಿ]
ಅತಸೀಕುಸುಮಗಾತ್ರನಂ ಕಮಲನೇತ್ರನಂ ಸ್ಮಿತ ರುಚಿರಶುಭ ರದನನಂ ಚಾರು ವದನನಂ | ಕೃತಮೃಗಮದೋಲ್ಲಸತ್ಸುಲಲಾಟನಂ ಮಣಿಕೀರಿಟನಂ ಕಂಬುಗಳದ || |
[ಆವರಣದಲ್ಲಿ ಅರ್ಥ];=
|
ಪದ್ಯ :-:೨೭:[ಸಂಪಾದಿಸಿ]
ಜಯ ಚತುರ್ಮುಖಜನಕ ಜಯ ಚಾರುಚಾರಿತ್ರ ಜಯ ಚಿದಾನಂದ ಜಯ ಚೀರಾಂಬರಜ್ಞೇಯ | ಜಯ ಜಯ ಚ್ಯುತಿದೂರ ಜಯ ಚೂಡಬರ್ಹಶೊಭಿತ ಚೇತನಸ್ವರೂಪ || |
[ಆವರಣದಲ್ಲಿ ಅರ್ಥ];=
|
ಪದ್ಯ :-:೨೮:[ಸಂಪಾದಿಸಿ]
ಜೀಯ ಜಗದಂತರಾತ್ಮಕ ಸರ್ವಚೈತನ್ಯ | ಜೀಯ ಶುದ್ಧಾದ್ವಯ ನಿರಂಜನ ನಿರಾವರಣ | ಜೀಯ ನಿನ್ನೊಳಗೀ ಸಮಸ್ತಮಧ್ಯಸ್ತಮಾಗಿದೆ ನೀನೆ ಸತ್ಯರೂಪ || |
[ಆವರಣದಲ್ಲಿ ಅರ್ಥ];=
|
ಪದ್ಯ :-:೨೯:[ಸಂಪಾದಿಸಿ]
ಭಯಭರಿತಭಕ್ತಿಯಿಂ ಭಾವಿಸಿದನಾ ಜಗ | ನ್ಮಯನಂ ಬಳಿಕ ದೇವ ಕೇಳ್ ನಿನ್ನ ಸರ್ವಜ್ಞ | ತೆಯನೆನಗೆ ತೋರಿಸಿದೆ ಲೇಸಾಯ್ತು ನಿನ್ನ ಕೃಪೆಯಿಲ್ಲದೊಡೆ ಪಾಂಡವರ್ಗೆ || |
[ಆವರಣದಲ್ಲಿ ಅರ್ಥ];=
|
ಪದ್ಯ :-:೩೦:[ಸಂಪಾದಿಸಿ]
ಅರ್ಜುನಂ ಕೇಳ್ದನೆಲೆ ಮರುಳೆ ನೋಡಾದೊಡಿ | ನ್ನಾರ್ಜಿಸಿದ ಸುಕೃತಮೆಳ್ಳನಿತಿಲ್ಲದಿಹ ಪುಣ್ಯ ವರ್ಜಿತನ ಒಓಕಮಾಗಲಿ ತನಗೆ ನಿನ್ನ ತಲೆಯಂ ಮೂರುಬಾಣದಿಂದೆ || |
[ಆವರಣದಲ್ಲಿ ಅರ್ಥ];=
|
ಪದ್ಯ :-:೩೧:[ಸಂಪಾದಿಸಿ]
ಗರ್ವದಿಂ ನುಡಿದೆಲಾ ಪಾರ್ಥ ಕೃಷ್ಣನ ಮುಂದೆ | ಗೀರ್ವಾಣರೆಲ್ಲರುಂ ನೋಡುತ್ತಿರಲೀಗ ನೀಂ | ಸರ್ವಶಕ್ತಿಯೊಳಿಸುವ ಮೂರುಬಾಣಂಗಳಂ ನಡುವೆ ಖಂಡಿಸದಿರ್ದೊಡೆ || |
[ಆವರಣದಲ್ಲಿ ಅರ್ಥ];=
|
ಪದ್ಯ :-:೩೨:[ಸಂಪಾದಿಸಿ]
ತೇರ್ಮಗುಳ್ದಳವಿಯಿಂ ತೊಲಗಿ ಬೆಂಡಾಗಿ ನಾ | ನೂರ್ಮೊಳಂ ಪೋಗಲ್ಕೆ ತಲೆದೂಗಿ ಮುರಹರಂ | ಕಾರ್ಮೊಳಗುವಂತಿರೆ ಸುಧನ್ವನಂ ಕೊಂಡಾಡಿ ನೋಡಿ ಪಾರ್ಥನ ಮೊಗವನು|| |
[ಆವರಣದಲ್ಲಿ ಅರ್ಥ];=
|
ಪದ್ಯ :-:೩೩:[ಸಂಪಾದಿಸಿ]
ಇವನೇಕಪತ್ನೀವ್ರತಸ್ಥನಾಗಿಹುದರಿಂ| ತವೆ ತಾತ ನಾಜ್ಞೆಯಂ ಪಾಲಿಸುತೆ ಬಹುದರಿಂ | ಕವಲಿಲ್ಲದೆಮ್ಮನರ್ಚಿಪ ಭಕ್ತನಹುದರಿಂದಜ ಭವ ಸುರೇಶ್ವರರ್ಗೆ || |
[ಆವರಣದಲ್ಲಿ ಅರ್ಥ];=
|
ಪದ್ಯ :-:೩೪:[ಸಂಪಾದಿಸಿ]
ಅನಿತರೊಳ್ ಕಲಿಸುಧನ್ವಂ ಕೇಳ್ದು ನುಡಿದನೆಲೆ ವನಜಾಕ್ಷ ಬೆಟ್ಟಮಂ ಕೊಡೆವಿಡಿದು ಪಟ್ಟಿಯಂ | ನನೆಯಲೀ ಯದವೊಲೀ ಪಾರ್ಥನಂ ರಕ್ಷಸುವೆ ನೀಂ ಕೃಪೆಯೊಳಾವು ಬರಿದೆ || |
[ಆವರಣದಲ್ಲಿ ಅರ್ಥ];=
|
ಪದ್ಯ :-:೩೫:[ಸಂಪಾದಿಸಿ]
ಸುರ್ರನೆ ಸುಳಿದು ಸುತ್ತಿ ಬೆಂಡಾಗೆ ಕುದುರೆಗಳ್ ಕಿರ್ರನೆ ಪಪೀಶ್ವರಂ ಪಲ್ಗಿರಿದು ಚೀರಲ್ಕೆ | ಕರ್ರನೆ ಕವಿಯೆ ಕಣ್ಗೆ ಕೆತ್ತಲೆ ಶಿರೋಭ್ರಮಣೆಯಿಂ ಕೃಷ್ಣ ಫಲುಗುಣರ್ಗೆ || |
[ಆವರಣದಲ್ಲಿ ಅರ್ಥ];=
|
ಪದ್ಯ :-:೩೬:[ಸಂಪಾದಿಸಿ]
ಪೊಡವಿಪತಿ ಕೇಳ್ ಬಳಿಕ ಕಣ್ ಕೆಂಡದಂತಾಗೆ ಕುಡಿಹುಬ್ಬು ಧೂಮಲತೆಯೆಂಬೊಲಿರೆ ಹುಂಕಾರ | ದೊಡವೆ ನಿಶ್ವಾಸಮಂ ಬಿಗುವ ನಾಸಾಪುಟಂ ಜ್ವಾಲೆಯಂದೊಳೊಪ್ಪಿರೆ || |
[ಆವರಣದಲ್ಲಿ ಅರ್ಥ];=
|
ಪದ್ಯ :-:೩೭:[ಸಂಪಾದಿಸಿ]
ಖತಿಯಿಂವೆ ಫಲುಗುಣಂ ಪೂಡಿದ ಮಹಾಸ್ತ್ರಮಂ ಶತಪತ್ರಲೋಚನಂ ಕಂಡದಕೆ ಮುನ್ನತಾ | ನತುಲಗೋವರ್ಧನವನಾಂತು ಗೋಕುಲವನೋವಿದ ಸುಕೃತಫಲವನಿತು || |
[ಆವರಣದಲ್ಲಿ ಅರ್ಥ];=
|
ಪದ್ಯ :-:೩೮:[ಸಂಪಾದಿಸಿ]
ಅಹಹ ಮುರಹರ ಪಾರ್ಧನಿಸುವ ಬಾಣಕೆ ನಿನ್ನ ಬಹಳ ಸುಕೃತವನಿತ್ತೆ ಲೇಸಾದುದಿದನರಿಯೆ | ಬಹುದೆ ನೋವಿಲ್ಲಲಾ ನಿನಗೆನುತ ತೀವ್ರದಿಂ ಕೊರಳ ಸಿರಸಕೆ ನಭದೊಳು || |
[ಆವರಣದಲ್ಲಿ ಅರ್ಥ];=
|
ಪದ್ಯ :-:೩೯:[ಸಂಪಾದಿಸಿ]
ಮೂರುಬಾಣದೊಳಿವನ ತಲೆಯನರಿದಪೆನೆಂದು ತೋರಿಯಠಾಡಿದೆನಾಂ ಪ್ರತಿಜ್ಞೆಯನದರೊಳೊಂದು | ಮೀರಿಪೋದುದು ಕೋಲೆರಡರಿಂವೆ ರಿಪುಶಿರವನಿಳುಹಬೇಕೆನುತೆ ನರನು || |
[ಆವರಣದಲ್ಲಿ ಅರ್ಥ];=
|
ಪದ್ಯ :-:೪೦:[ಸಂಪಾದಿಸಿ]
ಆಗಳತಿ ರೋಷದಿಂದಾಲಿಗಳ್ ಕೆಂಪಡರ ಲೀಗಳರ್ಜುನನ ಬಾಣಕೆ ನಿನ್ನ ಪುಣ್ಯಮಂ | ನೀಗಿದೆಯಲಾ ದೇವ ನೋಡು ಬಹ ದಿವ್ಯಾಸ್ತ್ರಮಂ ಕತ್ತರಿಸದಿರ್ದೊಡೆ || |
[ಆವರಣದಲ್ಲಿ ಅರ್ಥ];=
|
ಪದ್ಯ :-:೪೧:[ಸಂಪಾದಿಸಿ]
ಕೊಡೆ ಮೊಳಗಿದುವು ನಿಸ್ಸಾಳಂಗಳೈದೆ ಕೊಂಡಾಡಿದರ್ ಸುರರಭ್ರದೊಳಿ ಬಳಿಕ ಕೃಷ್ಣ ನಂ | ನೋಡಿ ನುಡಿದಂ ಪಾರ್ಥನೆರಡಂಬು ಮುರಿದುದಿನ್ನೊಂದರೊಳಿವನ ಶಿರವನು || |
[ಆವರಣದಲ್ಲಿ ಅರ್ಥ];=
|
ಪದ್ಯ :-:೪೨:[ಸಂಪಾದಿಸಿ]
ಆ ಹೂಡಿದರ್ಜುನನ ಮಾರ್ಗಣದ ಮೊದಲೊಳಾ ವಾಹನಂಗೈದು ಕಮಲಜನಂ ನಿಲಿಸಿ ವೃಷಭ | ವಾಹನನ ಕೋಲ್ದುದಿಗೆ ತಂದಿರಿಸಿ ಸಾಯಕದ ನಡುವೆ ತಾನೇ ವ್ಯಾಪಿಸಿ || |
[ಆವರಣದಲ್ಲಿ ಅರ್ಥ];=
|
ಪದ್ಯ :-:೪೩:[ಸಂಪಾದಿಸಿ]
ಕೋಟಿಸಿಡಿಲೊಮ್ಮೆ ಗರ್ಜಿಸುವೊಲೂದಿದನಾ ನಿ ಶಾಟದಲ್ಲಣನತುಳಪಾಂಚಜನವನಾ ಕಿ | ರೀಟಿ ಪಿಡಿದಂ ದೇವದತ್ತಮಂ ಸಪ್ತಾಬ್ಧಿರಭಸಮೊಬ್ಬುಳಿಸುವಂತೆ || |
[ಆವರಣದಲ್ಲಿ ಅರ್ಥ];=
|
ಪದ್ಯ :-:೪೪:[ಸಂಪಾದಿಸಿ]
ಕಂಡ ನೀತೆರನಂ ಸುಧನ್ವನಿಂತೆಂದನೆಲೆ ಪುಂಡರೀಕಾಕ್ಷ ನಿನ್ನಯ ಪುಣ್ಯಮಂ ಸೂರೆ | ಗೊಂಡವಂ ತಾನೋ ಧನಂಜಯನೊ ಪುಸಿಯದುಸಿರೆನಗೆ ಸಾಕಿನ್ನು ಬರಿದೆ || |
[ಆವರಣದಲ್ಲಿ ಅರ್ಥ];=
|
ಪದ್ಯ :-:೪೫:[ಸಂಪಾದಿಸಿ]
ಭೂಸುರರ್ ಬಂದು ಕಾಶಿಯೂಳೆಸೆವ ಮಣಿಕರ್ಣಿ| ಕಾಸಲಿಲದೊಳ್ ಮಿಂದು ಶಾಸ್ತ್ರವಿದಿಯಿಂದಮುಪ | ವಾಸಮಂ ಮಾಡಿ ಶಿವರಾತ್ರಿಯೋಳ್ ವಿರಚಿಸಿದ ವಿಶ್ವೇಶಪೂಜೆಗಳನು || |
[ಆವರಣದಲ್ಲಿ ಅರ್ಥ];=
|
ಪದ್ಯ :-:೪೬:[ಸಂಪಾದಿಸಿ]
ಅನಿತರೊಳ್ ತ್ರೈಮೂರ್ತಿಗಳ ದಿವ್ಯಶಕ್ತಿಯಿಂ |ವಿನುತ ರಾಮಾವತಾರದ ಪುಣ್ಯಶಕ್ತಿಯಿಂ | ದನುಪಮ ಧನುರ್ವೇದದುರುಮಂತ್ರಶಕ್ತಿಯಿಂ ತೀವಿದ ಮಹಾಶರವನು || |
[ಆವರಣದಲ್ಲಿ ಅರ್ಥ];=
|
ಪದ್ಯ :-:೪೭:[ಸಂಪಾದಿಸಿ]
ಹೆದರಿತುಭಯದ ಸೇನೆ ಕೆದರಿತು ಸುರಸ್ತೋಮ | ಮೊದರಿತಿನಮಂಡಲಂ ಬೆದರಿತು ಜಗತ್ತ್ರಯಂ | ಬಿದರಿತು ಕುಲಾದ್ರಿಚಯ ಮುದುರಿತುಡುಸಂದೋಹಮದಿರಿತಿಳೆ ತತ್ಕ್ಷಣದೊಳು || |
[ಆವರಣದಲ್ಲಿ ಅರ್ಥ];=
|
ಪದ್ಯ :-:೪೮:[ಸಂಪಾದಿಸಿ]
ಬೆಚ್ಚಿದನೆ ಬೆದರಿದನೆ ಚಿತ್ತದೊಳ್ ಕಲಿತನದ ಕೆಚ್ಚು ಕೊರಗಿತೆ ಬಹ ಮಹಾಶರವನಾಗಳಾ | ರ್ದೆಚ್ಚಂ ಸುಧನ್ವನಿಕ್ಕಡಿಯಾದುದಂದು ಬಿದ್ದುದು ಹಿಂದಣರ್ಧಮಿಳೆಗೆ || |
[ಆವರಣದಲ್ಲಿ ಅರ್ಥ];=
|
ಪದ್ಯ :-:೪೯:[ಸಂಪಾದಿಸಿ]
ಕಂದು ಕುಂದಿಲ್ಲದ ಸುವೃತ್ತದಿಂದೆಸೆವ ತನ| ಗೊಂದುಬಾರಿಯುಮಿನ್ನು ಪರಪೀಡೆ ಲೇಸಲ್ಲ | ಪೆಂದು ನಿಜವೈರಮಂ ಬಿಟ್ಟು ಕಮಲಂಗಳಂ ಸಂತೈಸೆ ಗಗನದಿಂದೆ || |
[ಆವರಣದಲ್ಲಿ ಅರ್ಥ];=
|
ಪದ್ಯ :-:೫೦:[ಸಂಪಾದಿಸಿ]
ತಪ್ಪಿದನಲಾ ಚಕ್ರಿ ಹಾಯೆಂದು ಸುರರುಲಿಯ| ಲುಪ್ಪರಿಸಿ ತಲೆ ಚಿಗಿಯಲವನಟ್ಟೆ ತೋಳ್ಗಳಂ | ಚಪ್ಪರಿಸಿಕೊಂಡೆದ್ದು ಬಂದು ರಣರಂಗದೊಳ್ ತಿರುತಿರುಗಿ ಚಾರಿವರಿದು || |
[ಆವರಣದಲ್ಲಿ ಅರ್ಥ];=
|
ಪದ್ಯ :-:೫೧:[ಸಂಪಾದಿಸಿ]
ಹೊಳೆವ ಕುಂಡಲದ ಕದಪಿನ ಮುರಿದೆಸೆವ ಮೀಸೆ| ಗಳ ನಗೆಮೊಗದ ರದನಪಂಕ್ತಿಗಳ ಬಿಟ್ಟ ಕಂ | ಗಳ ಬಿಗಿದ ಹುಬ್ಬುಗಳ ಪೆರೆನೊಸಲ ತಿಲಕದ ನವಿರ ಹಿಣಿಲ ಕಾಂತಿಯಿಂದೆ || |
[ಆವರಣದಲ್ಲಿ ಅರ್ಥ];=
|
ಪದ್ಯ :-:೫೨:[ಸಂಪಾದಿಸಿ]
ಕೈದಳದೊಳೆಸೆವ ತಲೆಯಂ ನಾಸಿಕಾಗ್ರದೆಡೆ| ಗೊಯ್ದು ಮುರಮಥನನಾಘ್ರಾಣಿಸಿದನಾತನೇ | ಗೈದನೆಂಬುದನಚ್ಯುತನೆ ಬಲ್ಲನಾಗಲಾ ಮೊಗದಿಂದೆ ತನ್ನ ಮೊಗೆಕೆ || |
[ಆವರಣದಲ್ಲಿ ಅರ್ಥ];=
|
ಪದ್ಯ :-:೫೩:[ಸಂಪಾದಿಸಿ]
ಭೂಪಾಲ ಕೇಳ್ ನೋಡುತಿರ್ದಂ ಸುಧನ್ವನಾ| ಟೋಪಮಂ ತಲೆ ಪಾರ್ಥನಸ್ತ್ರದಿಂ ಪರಿಯೆ ಸಂ | ತಾಪದಿಂ ಮರುಗುತಿಳೆಯೊಳ್ ಪೊರಳ್ವಿನಮಾಶಿರಂ ತನ್ನ ಬಳಿಗೆ ಬರಲು|| |
[ಆವರಣದಲ್ಲಿ ಅರ್ಥ];=
|
ಪದ್ಯ :-:೫೪:[ಸಂಪಾದಿಸಿ]
ಬೀಳ್ಟೆನೋ ಶೈಲಾಗ್ರದಿಂದೆ ಕರ್ಮಡುವಿನೊಳ| ಗಾಳ್ವೆ ನೋ ನಿನ್ನ ನಿಟ್ಟೆಪ ತನ್ನ ಕಂಗಳಂ | ಕೀಳ್ಟನೊ ಪರಸಿ ಪಡೆದೊಡಲನುರೆ ಸೀಳ್ಟೆನೋ ನಿನ್ನ ನುಡಿಗಳನೆಂದಿಗೆ || |
[ಆವರಣದಲ್ಲಿ ಅರ್ಥ];=
|
ಪದ್ಯ :-:೫೫:[ಸಂಪಾದಿಸಿ]
ಕೊಳುಗುಳಕೆ ನಡೆತಂದೆ ಬಿಲ್ಟಿಡಿಯುತೈತಂದೆ| ಪಲುಗುಣನೊಡನೆ ಹೋರಿ ಜಯಿಸಬೇಡವೇ ಹೋರಿ| ಕಲಿತನದೊಳುಕ್ಕಿ ಕಂದದಾತ ನೀನೇಕೆ ಅಂದವಳಿದೆ ರಣದೊಳಗೆ ಕಂದ || |
[ಆವರಣದಲ್ಲಿ ಅರ್ಥ];=
|
ಪದ್ಯ :-:೫೬:[ಸಂಪಾದಿಸಿ]
ಮೋಹಮುಳ್ಳೊಡೆ ತಪ್ತ ತೈಲಪೂರಿತ ಘನಕ| ಟಾಹದೊಳ್ ಕೆಡಪಿಸುವನೇ ತಂದೆ ತನಯನಂ | ಬಾಹಿರಂಗದ ಶೋಕವೆಂದು ಜರೆಯದೆ ಲೋಕಮೀಗ ಹಲುಬಲ್ ತನ್ನನು || |
[ಆವರಣದಲ್ಲಿ ಅರ್ಥ];=
|
ಪದ್ಯ :-:೫೭:[ಸಂಪಾದಿಸಿ]
ಅಣ್ಣದೇವಂ ಕದನಮಂ ಜಯಿಸಿ ಬಹನೆಂದು ಬಣ್ಣದ ಸೊಡರ್ಗಳಂ ಕೈಗೈಸುವನುಜೆಯಂ | ಹುಣ್ಣಿಮೆಯ ಶಶಿಯಂದದಾಸ್ಯದೆಳನಗೆಯೊಳೈತಹ ನಿನ್ನ ವಲ್ಲಭೆಯನು || |
[ಆವರಣದಲ್ಲಿ ಅರ್ಥ];=
|
ಪದ್ಯ :-:೫೮:[ಸಂಪಾದಿಸಿ]
ತಾತನಲ್ಲವೆ ನಿನಗೆ ತಾನೆನ್ನೊಳಿಂತಕಟ ಮಾತಾಡದಿಹರೆ ನಿನ್ನಂ ಪಡೆದಳಂ ವೀರ | ಮಾತೆಯೆಂಬರ್ ಕಟ್ಟುನರನ ಹಯವಂ ಕಾದು ನಡೆ ಕೃಷ್ಣಫಲುಗಣರೊಳು || |
[ಆವರಣದಲ್ಲಿ ಅರ್ಥ];=
|
ಪದ್ಯ :-:೫೯:[ಸಂಪಾದಿಸಿ]
ಲಂಬಿಸಿದನತಿಶೋಕ ಭಾರದಿಂ ಮೊಗಮಿಟ್ಟು| ಚುಂಬಿಸಿದನಡಿಗಡಿಗೆ ನಾನಾಪ್ರಕಾರದಿಂ| ಪಂಬಲಿಸಿ ಸುತನ ಗುಣಶೀಲಂಗಳಂ ನೆನೆದು ಹಳವಳಿಸಿದಂ ಪೆರ್ಚಿದ || |
[ಆವರಣದಲ್ಲಿ ಅರ್ಥ];=
|
ಪದ್ಯ :-:೬೦:[ಸಂಪಾದಿಸಿ]
ಕಾಳಗಕೆ ಮುಂಕೊಂಡು ನಡೆವರಾರಿನ್ನು ತಮ ಗೂಳಿಗವನಿತ್ತು ಬೆಸಸುವರುಂಟೆ ನೀನೆ ಕ | ಟ್ಟಾಳೆಂಬರೀಗಳಿಂತಳಿದಪರೆ ದಾತಾರ ವೀರ ಸುಕುಮಾರಧೀರ || |
[ಆವರಣದಲ್ಲಿ ಅರ್ಥ];=
|
ಪದ್ಯ :-:೬೦:[ಸಂಪಾದಿಸಿ]
ಬಳಿಕ ಆ ಸುಧನ್ವನ ಸಹೋದರಂ ಸುರಥಂ ಬಹಳ ಶೋಕಭಾರಮಂ ತಳೆದಿರ್ದ ಅವಂ ಕೂಡೆ ತಿಳಿದು ಕಡುಗೋಪದಿಂ ಬಿಲ್ಕೊಂಡು ನುಡಿದನೆಲೆ ತಾತ ಕೇಳೀತನನಿಂದು || |
[ಆವರಣದಲ್ಲಿ ಅರ್ಥ];=
|
ಪದ್ಯ :-:೬೨:[ಸಂಪಾದಿಸಿ]
ಉಂಟು ಕೃಷ್ಣನ ಮುಂದೆ ಭಾಷೆಯಂ ಪೂರೈಸಿ ಟಿಂಟಣಿಸದೊಡಲಂ ತೊರೆದು ಮುಕ್ತಿ ರಾಜ್ಯಮಂ | ವೆಂಟಳಿಕೊಂಡಂ ಸುಧನ್ವನಿಂತಿದಕಾಗಿ ಧೈತಿಗೆಟ್ಟಳಲ್ದುದಿಲ್ಲ | |
[ಆವರಣದಲ್ಲಿ ಅರ್ಥ];=
|
ಪದ್ಯ :-:೬೩:[ಸಂಪಾದಿಸಿ]
ತಾತ ಚಿತ್ತೈಸಿದರೊಳೇನಹುದು ತಿರುಗಿ ಬಿಸು| ಡೀ ತಲೆಯ ನಸುರಾಂತಕನ ಚರಣದೆಡೆಗೆ ಸಹ | ಜಾತನಂ ಕೊಂದಾತನಂ ಕೊಲ್ವೆನೆಂದು ಸುರಥಂ ರಥಕಡರ್ದಬಳಿಕ || |
[ಆವರಣದಲ್ಲಿ ಅರ್ಥ];=
|
ಪದ್ಯ :-:೬೪:[ಸಂಪಾದಿಸಿ]
ಅಡಗಿತಾ ಶಿರಮಲ್ಲಿ ಹಂಸಧ್ವಜಂ ತನ್ನ | ಪಡೆಸಹಿತ ನಿಂದನಾಹವಕೆ ಸನ್ನಾಹದಿಂ | ದೊಡಹುnÖದಂ ಮಡಿದಳಲ್ಗೆ ಸುರಥಂ ರಥಕಡರ್ದು ನಿಜಕಾರ್ಮುಕವನು || |
[ಆವರಣದಲ್ಲಿ ಅರ್ಥ];=
|
ಹೋಗಿ[ಸಂಪಾದಿಸಿ]
ನೋಡಿ[ಸಂಪಾದಿಸಿ]
ಜೈಮಿನಿ ಭಾರತ-ಸಂಧಿಗಳು:*1 * 2 *3 * 4 * 5 *6 * 7 * 8 *9 * 10 * 11* 12* 13 * 14 * 15 * 16 *17* 18 * 19* 20 * 21 * 22* 23* 24 * 25* 26* 27* 28* 29* 30* 31* 32* 33* 34 |
ಪರಿವಿಡಿ[ಸಂಪಾದಿಸಿ]
ಕನ್ನಡ ವಿಕಿಸೋರ್ಸ್[ಸಂಪಾದಿಸಿ]
ಹಳಗನ್ನಡ ಸಾಹಿತ್ಯ| ಪಂಪಭಾರತ |ಜೈಮಿನಿ ಭಾರತ |ಕುಮಾರವ್ಯಾಸ ಭಾರತ | ನಾಡಗೀತೆಗಳು | ಜನಪದ ಸಾಹಿತ್ಯ | ಚಲನಚಿತ್ರ ಸಾಹಿತ್ಯ | ಚಲನಚಿತ್ರೇತರ ಸಾಹಿತ್ಯ |ಭಾವಗೀತೆಗಳು | ಭಕ್ತಿಗೀತೆಗಳು | ದಾಸ ಸಾಹಿತ್ಯ | ವಚನ ಸಾಹಿತ್ಯ | ತಾತ್ವಿಕ ಸಾಹಿತ್ಯ | ಭಗವದ್ಗೀತೆ |
ಮಂಕುತಿಮ್ಮನ ಕಗ್ಗ | ಶಿಶು ಸಾಹಿತ್ಯ | ಕವನ ಸಂಕಲನಗಳು | ಸಂಪ್ರದಾಯ ಗೀತೆಗಳು |ಮಂಕುತಿಮ್ಮನ ಕಗ್ಗ|
ಜೀವನ ಚರಿತ್ರೆ|ಸ್ತೋತ್ರಗಳು|ಸಂಸ್ಕೃತ ಸಾಹಿತ್ಯ
ಒಲ್ಲೇಖ[ಸಂಪಾದಿಸಿ]
- ↑ ಉ(.ದಕ್ಷಿಣಾಮೂರ್ತಿ ಶಾಸ್ತ್ರಿ ಮಕ್ಕಳು ಡಿ.ಸುಬ್ಬಾಶಾತ್ರಿಗಳ ಮಕ್ಕಳಾದ ರಂಗಶೇಷಶಾಸ್ತ್ರಿ ; ದಕ್ಷಿಣಾಮೂರ್ತಿ ಶಾಸ್ತ್ರಿ ; ಇವರಿಂದ ರಚಿತವಾದ ನಡುಗನ್ನಡದಲ್ಲಿರುವ ಸುಮಾರು ೧೯೨೦ರಲ್ಲಿ ಅಚ್ಚಾದ ಜೈಮಿನಿಭಾರತ- ಸಟೀಕಾ ಇದರ ಆಧಾರ. -ಕಳಪೆ ಕಾಗದದ ಪುಸ್ತಕ ಜೀರ್ಣವಾಗಿದ್ದು ಮುದ್ರಣ ವಿವರ ಅಸ್ಪಷ್ಟ)
- ↑ ಜೈಮಿನಿ ಭಾರತ -ಟಿ ಕೃಷ್ನಯ್ಯ ಶೆಟ್ಟಿ & ಸಂನ್ಸ ಬಳೆಪೇಟೆ ಬೆಂಗಳೂರು.