ವಿಷಯಕ್ಕೆ ಹೋಗು

ಜ್ಯೋತಿಯ ತಮವೆಡೆಗೊಡಂತೆ ಚಂದ್ರಮನ

ವಿಕಿಸೋರ್ಸ್ದಿಂದ


ಶೀರ್ಷಿಕೆ: vachana saahitya
ವರ್ಷ: 1550-1600 AD
ಪ್ರಕಾಶಕರು: anubhava mantapa
ಮೂಲ: vachana saahitya


ಜ್ಯೋತಿಯ ತಮವೆಡೆಗೊಡಂತೆ ಚಂದ್ರಮನ ರಾಹುಎಡೆಗೊಂಡಂತೆ ನಿಧಾನವ ಸರ್ಪನೆಡೆಗೊಂಡಂತೆ ಅಂಬುದ್ಥಿಯ ಅನಲನೆಡೆಗೊಂಡಂತೆ ಮನವ ಮಾಯವಡೆಗೊಂಡು ನಿಮ್ಮ ನೆನಹ ನೆಲೆಗೊಳಲೀಯದೆ ಮರಣಕ್ಕೊಳಗುಮಾಡುತ್ತಿಪ್ಪುದಯ್ಯ. ಈ ತಮವ ಪರಿಹರಿಸಿ ಎನ್ನನುಳುಹಿಕೊಳ್ಳಯ್ಯಾ
ಮಹಾಲಿಂಗಗುರು ಶಿವಸಿದ್ಧೇಶ್ವರ ಪ್ರಭುವೇ.