Transclusion_Status_Detection_Tool

ತತ್ವಾತತ್ವಂಗಳಿಲ್ಲದಂದು, ಸಾಕ್ಷಿಸಭೆಗಳಿಲ್ಲದಂದು, ಏನೇನಿಲ್ಲದಂದು,

ವಿಕಿಸೋರ್ಸ್ದಿಂದ
ನ್ಯಾವಿಗೇಷನ್‌ಗೆ ಹೋಗು ಹುಡುಕಲು ಹೋಗು



Pages   (key to Page Status)   


ತತ್ವಾತತ್ವಂಗಳಿಲ್ಲದಂದು
ಸಾಕ್ಷಿಸಭೆಗಳಿಲ್ಲದಂದು
ಏನೇನಿಲ್ಲದಂದು
ಬಯಲು ಬಲಿವಂದು ಈ ಬಿಂದುವಾಯಿತ್ತು. ಆ ಬಿಂದು ಅಕ್ಷರತ್ರಯ ಗದ್ದಿಗೆಯಲ್ಲಿ ಕುಳ್ಳಿರಲು ಲೋಕದುತುಪತಿಯಾಯಿತ್ತು. ನಾದದ ಬಲದಿಂದ ಮೂರ್ತಿಯಾದನೊಬ್ಬ ಶರಣ. ಆ ಶರಣನಿಂದಾದುದು ಪ್ರಕೃತಿ
ಆ ಪ್ರಕೃತಿಯಿಂದಾಯಿತು ಲೋಕ ಲೌಕಿಕ ಆ ಲೋಕ ಲೌಕಿಕವನತಿಗಳೆದು ನಿಜದಲ್ಲಿ ನಿವಾಸಿಯಾಗಿಪ್ಪ ಗುಹೇಶ್ವರ
ನಿಮ್ಮ ಶರಣ ಸಂಗನಬಸವಣ್ಣ.