ತನುವಿಡಿದು ನಡೆವ ತ್ರಿವಿಧ
ಗೋಚರ
ಲೇಖಕರು: ಚೆನ್ನಬಸವಣ್ಣ
ಶೀರ್ಷಿಕೆ: vachana saahitya
ವರ್ಷ: 1144-1168 AD
ಪ್ರಕಾಶಕರು: anubhava mantapa
ಮೂಲ: vachana saahitya
ಪುಟಗಳು: ಇಲ್ಲಿನ ಪುಟಗಳು
ತನುವಿಡಿದು ನಡೆವ ತ್ರಿವಿಧ ಸಂಪತ್ತುಗಳು ಭಕ್ತ ಮಹೇಶ್ವರ ಪ್ರಸಾದಿ; ಮನ ವಿಡಿದು ನಡೆವ ತ್ರಿವಿಧ ಸಂಪತ್ತುಗಳು ಪ್ರಾಣಲಿಂಗಿ ಶರಣ ಐಕ್ಯ. ಈ ಉಭಯದನುಭವವಿಡಿದು `ಸ್ಥಾವರಂ ಜಂಗಮಶ್ಚೈವ ದ್ವಿವಿಧಂ ಲಿಂಗಮುಚ್ಯತೇ ಎಂಬ
ಈ ಭೇದವ ಭೇದಿಸಬಲ್ಲಡೆ ಹಿಂದಿಲ್ಲ ಮುಂದಿಲ್ಲ
ಇಹ ಪರ ಒಂದೆ
ಕರ್ಮ ನಾಸ್ತಿ ಭವಂ ನಾಸ್ತಿ. ಕೂಡಲಚೆನ್ನಸಂಗ ಸ್ವಾಯತವಾದವಂಗೆ ಇದು ಸಹಜ.