ದಾನ-ತ್ಯಾಗಬುದ್ಧಿ

ವಿಕಿಸೋರ್ಸ್ದಿಂದ
ನ್ಯಾವಿಗೇಷನ್‌ಗೆ ಹೋಗು ಹುಡುಕಲು ಹೋಗು

ರಚನೆ: ಸರ್ವಜ್ಞ



ಇಕ್ಕುವವನೂರಿಗೊಂದಕ್ಕಲೆಂದೆನಬೇಡ
ಅಕ್ಷಯ ಪದವ ಪಡೆದು ಕೈಲಾಸದಿಂ
ದೊಕ್ಕಲಿರಬಂದ ಸರ್ವಜ್ಞ ||

ಈವಂಗೆ ದೇವಂಗೆ ಆವುದಂತರವಯ್ಯ
ದೇವನು ಜಗಕೆ ಕೊಡುವನು ಕೈಯಾರೆ
ಈವನೇ ದೇವ ಸರ್ವಜ್ಞ ||

ಹುಟ್ಟುವಾಗೀ ಧನವ ಮೊಟ್ಟೆಗಟ್ಟಿಳಿದನೇ?
ಕಟ್ಟಕಡೆಯಲ್ಲಿ ಕೊಂಡೊಯ್ಯನಿದನರಿದು
ಕೊಟ್ಟುಂಬ ದಾನಿ ಸರ್ವಜ್ಞ ||

ಇಚ್ಚೆಯನು ಅರಿದಿತ್ತ ನುಚ್ಚೊಂದು ಮಾಣಿಕವು
ಇಚ್ಚೆಯಾ ತೀರ್ದ ಬಳಿಕಿತ್ತ ಮಾಣಿಕವು
ನುಚ್ಚಿನಿಂದತ್ತ ಸರ್ವಜ್ಞ ||

ಆಗ ಬಾ ಈಗ ಬಾ ಹೋಗಿ ಬಾ ಎನ್ನದೇ
ಆಗಲೇ ಕರೆದು ಕೊಡುವನ ಧರ್ಮ ಹೊ
ನ್ನಾಗದೇ ಬಿಡದು ಸರ್ವಜ್ಞ ||

ಸೊಡರೆಣ್ಣೆ ತೀರಿದರೆ ಕೊಡನೆತ್ತಿ ಹೊಯ್ಯುವರೇ?
ಕೊಡಬೇಡ ಕೊಡದೆ ಇರಬೇಡ ಧರ್ಮವ
ಬಿಡಬೇಡೆಂದ ಸರ್ವಜ್ಞ ||

ಆಡದೇ ಕೊಡುವವನು ರೂಢಿಯೊಳಗುತ್ತಮನು
ಆಡಿ ಕೊಡುವವನು ಮಧ್ಯಮನಧಮ ತಾ
ನಾಡಿ ಕೊಡದವನು ಸರ್ವಜ್ಞ ||

ವಿನಯವಿದ್ದಧಿಕರನು ತನುಗೆಟ್ಟ ಬಡವರನು
ಘನಹೀನವಳಿದು ಕರೆದುಣ್ಣದವನೂಟ
ಶುನಕ ತಿಂದಂತೆ ಸರ್ವಜ್ಞ ||

ಹೊತ್ತಾರೆ ಬಯ್ಗಿಂಗೆ ಮತ್ತೆ ಬಾ ಎಂದೆನುತ
ಹೊತ್ತನೆ ಕೊಂದು ಹುಸಿವವನಿಗಿಂತಲು
ಸತ್ತಾತ ಲೇಸು ಸರ್ವಜ್ಞ ||


ಕನ್ನಡ ವಿಕಿಸೋರ್ಸ್[ಸಂಪಾದಿಸಿ]

ಹಳಗನ್ನಡ ಸಾಹಿತ್ಯ| ಪಂಪಭಾರತ |ಜೈಮಿನಿ ಭಾರತ |ಕುಮಾರವ್ಯಾಸ ಭಾರತ | ನಾಡಗೀತೆಗಳು | ಜನಪದ ಸಾಹಿತ್ಯ | ಚಲನಚಿತ್ರ ಸಾಹಿತ್ಯ | ಚಲನಚಿತ್ರೇತರ ಸಾಹಿತ್ಯ |ಭಾವಗೀತೆಗಳು | ಭಕ್ತಿಗೀತೆಗಳು | ದಾಸ ಸಾಹಿತ್ಯ | ವಚನ ಸಾಹಿತ್ಯ | ತಾತ್ವಿಕ ಸಾಹಿತ್ಯ | ಭಗವದ್ಗೀತೆ |
ಮಂಕುತಿಮ್ಮನ ಕಗ್ಗ | ಶಿಶು ಸಾಹಿತ್ಯ | ಕವನ ಸಂಕಲನಗಳು | ಸಂಪ್ರದಾಯ ಗೀತೆಗಳು |ಮಂಕುತಿಮ್ಮನ ಕಗ್ಗ| |ಸರ್ವಜ್ಞ | ಜೀವನ ಚರಿತ್ರೆ|ಸ್ತೋತ್ರಗಳು|ಸಂಸ್ಕೃತ ಸಾಹಿತ್ಯ