ದಾಸಿಯ ವರ್ಗದಲ್ಲಿಪ್ಪೆನು ಶಿವಶರಣರ

ವಿಕಿಸೋರ್ಸ್ದಿಂದ


Pages   (key to Page Status)   

ದಾಸಿಯ ವರ್ಗದಲ್ಲಿಪ್ಪೆನು ಶಿವಶರಣರ ಮನೆಯಲ್ಲಿ. ಅವರೊಕ್ಕುದನುಂಡು
ಮಿಕ್ಕುದ ಕಾಯ್ದುಕೊಂಡಿಪ್ಪ ಕಾರಣ ಕಾಲ ಮುಟ್ಟಲಮ್ಮನು
ಕಲ್ಪಿತ ತೊಡೆುತ್ತು. ಭವಬಂಧನ ಹಿಂಗಿತ್ತು
ಕರ್ಮ ನಿರ್ಮಳವಾಗಿತ್ತು. ಅವರ ತೊತ್ತಿನ ತೊತ್ತಿನ ಪಡಿದೊತ್ತಿನ ಮಗನೆಂದು ಕೂಡಲಸಂಗಮದೇವನು `ಇತ್ತ ಬಾ ಎಂದು ಎತ್ತಿಕೊಂಡನು. 473