ಧರೆಯ ಮೇಲೊಂದು ಅರಿದಪ್ಪ
ಗೋಚರ
ಲೇಖಕರು: ಅಲ್ಲಮ ಪ್ರಭು
ಶೀರ್ಷಿಕೆ: vachana saahitya
ವರ್ಷ: 1120-1160 AD
ಪ್ರಕಾಶಕರು: anubhava mantapa
ಮೂಲ: vachana saahitya
ಪುಟಗಳು: ಇಲ್ಲಿನ ಪುಟಗಳು
ಧರೆಯ ಮೇಲೊಂದು ಅರಿದಪ್ಪ ರತ್ನ ಹುಟ್ಟಿರಲು
ಅದನರಸಲರಸ ಹೋಯಿತ್ತಯ್ಯಾ. ನಡುನೀರೊಳಗೆ ಮುಳುಗಿ
ಆಳವರಿದು ನೋಡಿ
ಕಂಡೆಹೆನೆಂದಡೆ ಕಾಣಬಾರದು. ಧಾರೆವಟ್ಟಲ ಕಳೆದುಕೊಂಡು ನೀರ ಶೋಧಿಸಿ ನೋಡಿದಡೆ ದೂರದಲ್ಲಿ ಕಾಣಬರುತ್ತಿಹುದು ನೋಡಾ. ಸಾರಕ್ಕೆ ಹೋಗಿ ಹಿಡಿದುಕೊಂಡೆನೆಂಬ ಧೀರರೆಲ್ಲರ ಮತಿಯ ಬಗೆಯ ನುಂಗಿತ್ತು ಗುಹೇಶ್ವರಾ