ನಳಚರಿತ್ರೆ:ನಾಲ್ಕನೆಯ ಸಂಧಿ

ವಿಕಿಸೋರ್ಸ್ದಿಂದ

<ನಳಚರಿತ್ರೆ

ನಳಚರಿತ್ರೆ:ನಾಲ್ಕನೆಯ ಸಂಧಿ (ಸಂಗ್ರಹ)[ಸಂಪಾದಿಸಿ]

ನಾಲ್ಕನೆಯ ಸಂಧಿ

ಒಂದು ದಿವಸದದೊಳಾಗ ನೃಪನಿಗೆ
ಬಂದುದಲ್ಲಾಚಮನಕಾಲದೊ
ಳಂದು ಶುದ್ಧಾಚಮನವಿಲ್ಲದೆ ನಿಂದು ನೀರ್ಗುಡಿಯೆ
ಇಂದು ತನಗಿದೆ ಸಮಯವೆಂದಾ
ನಂದದಲಿ ಕಲಿಪುರುಷ ರಾಯನ
ಸಂಧಿಸಿದ ವಿಧಿವಶವ ತಪ್ಪಿಸಲಾರ ಹವಣೆಂದ ||೨೧||

ಕಪಟ ಭೂಸುರವೇಶದಲಿ ನಿ
ಷ್ಕಪಟ ನಳಭೂವರನ ಕೆಡಿಸುವ
ಯುಪಮೆಯನು ತಾ ನೆಗಳಿ ಬಂದನು ಪುಷ್ಕರನ ಹೊರೆಗೆ
ನಿಪುಣನೆಂದನು ನಿನಗೆ ನಳಭೂ
ಮಿಪನು ಸಖನೆನೆ ಕೇಳಿ ಬಂದಿಹೆ
ನಪಯಶಕೆ ಹೆದರದಿರು ನಿನಗಹುದಖಿಳಸಾಮ್ರಾಜ್ಯ ||೨೨||

ಬಲ್ಲೆಯಾ ನೀನೆನ್ನ ಲೋಕಕೆ
ಬಲ್ಲಿದನು ತಾ ಕಲಿಪುರುಷ ನಳ
ನಲ್ಲಿ ದ್ಯೂತವನಾಡಿ ಗೆಲಿಸುವೆ ನಿನ್ನ ನೆತ್ತದಲಿ
ಒಲ್ಲೆನೆನದಿರು ಸಕಲರಾಜ್ಯದ
ವಲ್ಲಭನ ಮಾಡುವೆನು ನಡೆ ಹುಸಿ
ಯಿಲ್ಲ ನಿಷಧನ ಕಿತ್ತು ಬಿಸುಡುವೆ ನಂಬು ನೀನೆಂದ ||೨೩||

ನಂಬಿದನು ಲೇಸಾಗಿ ಭಾಷೆಯ
ನಿಂಬುಗೊಂಡುದು ಹೃದಯ ಪುಷ್ಕರ
ನೆಂಬ ಖಳ ಸಂತೋಷದಲಿ ಕಲಿಪುರುಷನೊಡಗೊಂಡು
ಅಂಬುಜಾಕ್ಷನ ಕಳೆಗೆ ತಾ ಪ್ರತಿ
ಬಿಂಬನೆನಿಸುವ ನಳನ ಬಳಿಗತಿ
ಸಂಭ್ರಮದೊಳೈತಂದರಿಬ್ಬರು ರಾಯನೋಲಗಕೆ ||೨೪||

ಅರಸ ಕೇಳೀ ವಿಪ್ರನತಿ ಭಾ
ಸುರ ಸುತೇಜದೊಳೆಸೆವ ನೆತ್ತವ
ನೆರಡ ಕಾಣಿಕೆಗೊಟ್ಟ ನನಗಿದರಲ್ಲಿ ಮನವಾಯ್ತು
ಹರವು ಹಾಸಂಗಿಗಳನಾಡುವೆ
ವಿರದೆ ಸೋತವನಾವನಾಗಲಿ
ಧರೆಯನುಳಿದು ವನಾಂತರಕೆ ತೆರಳುವುದು ಸತಿಸಹಿತ ||೨೬||

ಧರಣಿಪತಿ ನಿನಗಿನಿತು ಚಿತ್ತಕೆ
ಹರುಷವಾಗಿರಲಿನ್ನು ಮನದಲಿ
ಕೊರತೆದೋರಲು ಮಾಣುಯಿದು ಪಾರ್ಥಿವರ ಪಂಥ ಕಣ
ಧುರಕೆ ಬೇಂಟೆಗೆ ಜೂಜಿಗೆಂದಡೆ
ಕರೆದಡೋಸರಿಸುವುದು ನೀತಿಯೆ
ನಿರುತವಿದು ಚಿತ್ತೈಸುಯೆಂದನು ನೃಪಗೆ ಕೈಮುಗಿದು ||೨೭||

ಆಡಿದನು ಜೂಜಿನಲಿ ನೃಪ ಹೋ
ಗಾಡಿದನು ರಾಜ್ಯವನು ಕೋಶವ
ಕೇಡುಗರ ಕೈ ಮೇಳವಿಸಿದುದು ದೈವಗತಿಯಿಂದ
ಬಾಡಿತರಸನ ವದನ ಸಭೆಯಲಿ
ನೋಡಿದರು ಸಜ್ಜನರು ಮರುಗಿದ
ರಾಡಲೇನದನರಸ ಸೋತನು ವಿಧಿಯ ಘಟನೆಯಲಿ ||೩೦||

ಅರಸನಾಪ್ತಪುರೋಹಿತನು ಮನ
ಹರುಷವಿಳಿದೆಯ್ತಂದನಂತಃ
ಪುರವಹೊಕ್ಕನು ರಾಜದವದನೆಯ ಸಭೆಗೆ ತಾ ಬಂದು
ತರುಣಿಯರ ಮೇಳದಲಿ ಶೋಭಿಪ
ಪರಮರತ್ನದ ಪೀಠದಲಿ ತಾ
ಹರುಷಮಿಗೆ ರಂಜಿಸುವ ಸತಿಯಳ ಕಂಡು ಕೈಮುಗಿದು ||೩೨||

ತಾಯೆ ಬಿನ್ನಹವಿದು ನಿಮ್ಮಯ
ರಾಯ ಸೋತನು ಜೂಜಿನಲಿ ನಿ
ರ್ದಾಯದಲಿ ಪುಷ್ಕರನು ಗೆಲಿದನು ಸಕಲರಾಜ್ಯವನು
ನೋಯಲಾಗದು ಚಿತ್ತದಲಿ ನೆರೆ
ಬೀಯವಾದುದು ಸಿರಿಯುಯಿನ್ನಿದ
ರಾಯತವ ನೀವ್ ಬಲ್ಲಿರೆಂದನು ವಿಪ್ರ ಕೈಮುಗಿದು||೩೩||

ಕಮಲವನದಲಿ ಮಂಜು ಸುರಿದಾ
ಕ್ರಮದ ಬಗೆಯಲಿ ಸತಿಯಳಿಗೆ ಮುಖ
ಕಮಲ ಬಾಡಿತು ನುಡಿಯಕೇಳುತ ಮನದ ಚಿಂತೆಯಲಿ
ಕಮಲನಾಭನ ಕರುಣಕವಚವು
ಸಮೆದರಾರೇಗುವರು ಹರಹರ
ಕುಮತಿ ಪುಷ್ಕರನಿಂತು ಮುನಿದನೆಯೆನುತ ಮರುಗಿದಳು ||೩೪||

ಕಮಲಮುಖಿ ನಳನೃಪಗೆ ರಾಜ್ಯ
ಭ್ರಮಣವಾಯಿತೆಯೆನುತ ಸತಿ ಭೂ
ರಮಣನೆಡೆಗೈತಂದು ಕಂಡಳು ಕಾಂತನಿಂಗಿತವ
ತಮದ ರಾಹುಗ್ರಹವು ಸೋಂಕಿದ
ದ್ಯುಮಣಿಯಂತಿರೆ ಕಂಡು ಧೈರ್ಯದಿ
ಕಮಲಮುಖಿ ಕೈಮುಗಿದು ಬಿನ್ನೈಸೆದಳು ನಿಜಪತಿಗೆ ||೩೫||

ತರುಣಿ ಕೇಳಪಜಯದ ನಾರಿಯ
ಸೆರಗ ಹಿಡಿದೆನು ರಾಜ್ಯಲಕ್ಷ್ಮಿಯ
ಪರರಿಗಿತ್ತುಳುಹಿದೆನು ದೇಹವನಿದಕೆಯಂಜದಿರು
ತರುಣಿ ನೀ ಕಾನನದಿ ಗಿರಿಗ
ಹ್ವರಗಳಲಿ ಬಿಡದೆಂತು ತೊಳಲುವೆ
ಹರಹರಾಯೆಂದೆನುತ ಸತಿಯನು ನೋಡಿ ಬಿಸುಸುಯ್ದ||೩೮||

ಚಿಂತೆ ಬೇಡೆಂದರಸನನು ಸತಿ
ಸಂತವಿಟ್ಟಳು ನೀತಿಯಲಿ ದಮ
ಯಂತಿ ನಿಜಮಂದಿರಕೆ ಸರಿಯಲು ಕಂಡು ಪುಷ್ಕರನು
ಇಂತುಜೂಜಲಿ ಸೋತು ತಿರಿಗಿ
ನ್ನೆಂತು ರಾಜ್ಯದಿ ನಿಲುವಿರೆನೆ ಭೂ
ಕಾಂತ ವನವಾಸಕ್ಕೆ ನಿಜಸತಿಸಹಿತಲನುವಾದನು ||೪೧||

ನೋಡಿ[ಸಂಪಾದಿಸಿ]

ನಳಚರಿತ್ರೆ- ಸಂಧಿಗಳು>:

ನೋಡಿ[ಸಂಪಾದಿಸಿ]

ಕನ್ನಡ ವಿಕಿಸೋರ್ಸ್[ಸಂಪಾದಿಸಿ]

ಹಳಗನ್ನಡ ಸಾಹಿತ್ಯ| ಪಂಪಭಾರತ |ಜೈಮಿನಿ ಭಾರತ |ಕುಮಾರವ್ಯಾಸ ಭಾರತ | ನಾಡಗೀತೆಗಳು | ಜನಪದ ಸಾಹಿತ್ಯ | ಚಲನಚಿತ್ರ ಸಾಹಿತ್ಯ | ಚಲನಚಿತ್ರೇತರ ಸಾಹಿತ್ಯ |ಭಾವಗೀತೆಗಳು | ಭಕ್ತಿಗೀತೆಗಳು | ದಾಸ ಸಾಹಿತ್ಯ | ವಚನ ಸಾಹಿತ್ಯ | ತಾತ್ವಿಕ ಸಾಹಿತ್ಯ | ಭಗವದ್ಗೀತೆ |
ಮಂಕುತಿಮ್ಮನ ಕಗ್ಗ | ಶಿಶು ಸಾಹಿತ್ಯ | ಕವನ ಸಂಕಲನಗಳು | ಸಂಪ್ರದಾಯ ಗೀತೆಗಳು |ಮಂಕುತಿಮ್ಮನ ಕಗ್ಗ| |ಸರ್ವಜ್ಞ | ಜೀವನ ಚರಿತ್ರೆ|ಸ್ತೋತ್ರಗಳು|ಸಂಸ್ಕೃತ ಸಾಹಿತ್ಯ