ನಾನೊಂದು ಕಾರಣ ಮತ್ರ್ಯಕ್ಕೆ

ವಿಕಿಸೋರ್ಸ್ದಿಂದ


Pages   (key to Page Status)   

ನಾನೊಂದು ಕಾರಣ ಮತ್ರ್ಯಕ್ಕೆ ಬಂದೆನು
ಬಂದ ಬಳಲಿಕೆಯ ಪರಿಹರಿಸಲಿಕ್ಕೆ ಚೆನ್ನಬಸವಣ್ಣ ಬಂದನು
ಇನ್ನು ಬಾರದಂತೆ ಪ್ರಭುದೇವರು ಬಂದರು
ಇದಕ್ಕೆ ಆಜ್ಞಾಕರ್ತೃ ಮಡಿವಾಳ ಮಾಚಿತಂದೆ ಬಂದನು. ನಾನಿನ್ನಾರಿಗಂಜೆನು
ಬದುಕಿದೆನು ಕಾಣಾ ಕೂಡಲಸಂಗಮದೇವಾ.